ಮಿಥಾಲಿ ರಾಜ್-ರಮೇಶ್ ಪವಾರ್ 
ಕ್ರಿಕೆಟ್

ಕೊನೆಗೂ ಗೆದ್ದ ಮಿಥಾಲಿ ರಾಜ್, ಹೊಸ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ!

ಇತ್ತೀಚೆಗಷ್ಟೇ ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ಕೋಚ್ ರಮೇಶ್ ಪವಾರ್ ವಿರುದ್ಧ ಮಾಜಿ ನಾಯಿಕ ಮಿಥಾಲಿ ರಾಜ್ ಅವರು ಸಿಡಿದೆದ್ದಿದ್ದರು. ಇದು ಟೀಂ ವುಮೆನ್ ಇಂಡಿಯಾದಲ್ಲಿ ಬಿರುಗಾಳಿ ಎದ್ದಿತ್ತು...

ಮುಂಬೈ: ಇತ್ತೀಚೆಗಷ್ಟೇ ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ಕೋಚ್ ರಮೇಶ್ ಪವಾರ್ ವಿರುದ್ಧ ಮಾಜಿ ನಾಯಿಕ ಮಿಥಾಲಿ ರಾಜ್ ಅವರು ಸಿಡಿದೆದ್ದಿದ್ದರು. ಇದು ಟೀಂ ವುಮೆನ್ ಇಂಡಿಯಾದಲ್ಲಿ ಬಿರುಗಾಳಿ ಎದ್ದಿತ್ತು. 
ಭಾರತ ತಂಡದಲ್ಲಿನ ಹಲವು ಲೋಪಗಳು ಬಹಿರಂಗವಾಗಿದ್ದವು. ಇದರಿಂದ ಎಚ್ಚೆತ್ತಿರುವ ಬಿಸಿಸಿಐ ಮಹಿಳಾ ತಂಡ ಕೋಚ್ ರಮೇಶ್ ಪವಾರ್ ಅವರನ್ನು ತಂಡದ ಕೋಚ್ ಆಗಿ ಮುಂದುವರೆಸದಿರಲು ತೀರ್ಮಾನಿಸಿದೆ. 
ಮಹಿಳಾ ಟಿ20 ವಿಶ್ವಕಪ್ ನ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ವಿಶ್ವಕಪ್ ಗೆಲ್ಲುವ ಎಲ್ಲ ಲಕ್ಷಣ ತೋರಿದ್ದ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಮಿಥಾಲಿ ರಾಜ್ ರನ್ನು ಕೈಬಿಡಲಾಗಿತ್ತು. 
ಸೆಮಿಫೈನಲ್ ಪಂದ್ಯ ಸೋಲಿನ ಬಳಿಕ ಮಾತನಾಡಿದ್ದ ನಾಯಕಿ ಹರ್ಮನ್ ಪ್ರೀತ್ ಕೌರ್ ಮಿಥಾಲಿ ರಾಜ್ ಕೈ ಬಿಟ್ಟಿದ್ದಕ್ಕೆ ವಿಷಾದವಿಲ್ಲ ಎಂದು ಹೇಳಿದ್ದು ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದರು. ಇದಾದ ನಂತರ ಮಹಿಳಾ ತಂಡದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದೀಗ ಕೋಚ್ ಬದಲಾವಣೆ ಮೂಲಕ ವಿವಾದ ತಣ್ಣಗಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT