ರವಿಶಾಸ್ತ್ರಿ, ವಿರಾಟ್ ಕೊಹ್ಲಿ 
ಕ್ರಿಕೆಟ್

ಏಷ್ಯಾ ಕಪ್‌ನಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದ್ದೇಕೆ, ಪ್ರಧಾನ ಕೋಚ್ ರವಿಶಾಸ್ತ್ರಿ ಹೇಳಿದ್ದೇನು!

2018ರ ಏಷ್ಯಾಕಪ್ ಚಾಂಪಿಯನ್ ಆಗಿ ಟೀಂ ಇಂಡಿಯಾ ಹೊರಹೊಮ್ಮಿದೆ. ಇನ್ನು ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ಮುನ್ನಡೆಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು...

ಮುಂಬೈ: 2018ರ ಏಷ್ಯಾಕಪ್ ಚಾಂಪಿಯನ್ ಆಗಿ ಟೀಂ ಇಂಡಿಯಾ ಹೊರಹೊಮ್ಮಿದೆ. ಇನ್ನು ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ಮುನ್ನಡೆಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. 
ಏಷ್ಯಾಕಪ್ ನಲ್ಲಿ ವಿರಾಟ್ ಕೊಹ್ಲಿ ವಿಶ್ರಾಂತಿ ನೀಡಿದ್ದು ಯಾಕೆ ಅಂತ ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ರಹಸ್ಯ ಬಿಚ್ಚಿಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸುದೀರ್ಘ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಟಿ20, ಏಕದಿನ ಹಾಗೂ ಐದು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಸತತ ಕ್ರಿಕೆಟ್ ಪಂದ್ಯಗಳಲ್ಲಿ ಆಡಿದ್ದರಿಂದ ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇತ್ತು. ಈ ನಿಟ್ಟಿನಲ್ಲಿ ಅವರಿಗೆ ಮಾನಸಿಕ ನೆಮ್ಮದಿ ನೀಡುವ ಉದ್ದೇಶದಿಂದ ಏಷ್ಯಾ ಕಪ್ ಟೂರ್ನಿಯಿಂದ ವಿಶ್ರಾಂತಿ ನೀಡಲಾಗಿತ್ತು ಎಂದು ಹೇಳಿದ್ದಾರೆ. 
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಗಾಯದ ಸಮಸ್ಯೆಗೆ ಗುರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಸತತ ಪಂದ್ಯಗಳನ್ನು ಆಡುವುದರಿಂದ ಇದು ಅವರ ಪ್ರದರ್ಶನದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಗಳಿತ್ತು. 
ಏಷ್ಯಾ ಕಪ್ ತಂಡದಿಂದ ಕೊಹ್ಲಿಗೆ ವಿಶ್ರಾಂತಿ ನೀಡಿದ್ದಕ್ಕಾಗಿ ಕ್ರೀಡಾಭಿಮಾನಿಗಳು, ಕೆಲ ಹಿರಿಯ ಕ್ರಿಕೆಟ್ ಆಟಗಾರರು ಬಿಸಿಸಿಐ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಮಹತ್ವದ ಟೂರ್ನಿಯಿಂದ ಅವರಿಗೆ ವಿಶ್ರಾಂತಿ ನೀಡಿರುವುದು ಯಾಕೆ ಎಂಬ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT