ಎಂಎಸ್‌ಕೆ ಪ್ರಸಾದ್-ಕರುಣ್ ನಾಯರ್ 
ಕ್ರಿಕೆಟ್

ಹೈದರಾಬಾದ್‌ನ ಹನುಮನಿಗಾಗಿ 'ತ್ರಿಶತಕ ವೀರ' ಕನ್ನಡಿಗ ಕರುಣ್‌ರನ್ನು ಕಡೆಗಣಿಸಿದ್ರಾ ಎಂಎಸ್‌ಕೆ ಪ್ರಸಾದ್?

ಕಳೆದ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದರೂ ಒಂದು ಟೆಸ್ಟ್ ಪಂದ್ಯವಾಡಲು ಅವಕಾಶ ಸಿಗದೆ ಬೆಂಚ್ ಕಾಯುತ್ತಿದ್ದ ಕರುಣ್ ನಾಯರ್ ರನ್ನು ಹೈದರಾಬಾದ್ ನ ಹನುಮ...

ನವದೆಹಲಿ: ಕಳೆದ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದರೂ ಒಂದು ಟೆಸ್ಟ್ ಪಂದ್ಯವಾಡಲು ಅವಕಾಶ ಸಿಗದೆ ಬೆಂಚ್ ಕಾಯುತ್ತಿದ್ದ ತ್ರಿಶತಕ ವೀರ ಕರುಣ್ ನಾಯರ್ ರನ್ನು ಹೈದರಾಬಾದ್ ನ ಹನುಮ ವಿಹಾರಿಗಾಗಿ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ಕೆ ಪ್ರಸಾದ್ ಕಡೆಗಣಿಸಿದ್ದಾರೆ ಎಂಬ ಅನುಮಾನಗಳು ಮೂಡತೊಡಗಿವೆ. 
ಮುಂಬರುವ ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಯ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು ಇದರಲ್ಲಿ ಕರುಣ್ ನಾಯರ್ ಗೆ ಸ್ಥಾನ ನೀಡಿದೆ ಹನುಮ ವಿಹಾರಿಗೆ ಅವಕಾಶ ನೀಡಿರುವ ಎಂಎಸ್‌ಕೆ ಪ್ರಸಾದ್ ನಡೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. 
ಎಂಎಸ್‌ಕೆ ಪ್ರಸಾದ್ ಅವರು ಹೈದರಾಬಾದ್ ನವರಾಗಿದ್ದು ವಿಹಾರಿ ಸಹ ಹೈದರಾಬಾದ್ ನವರಾಗಿರುವುದರಿಂದ ಈ ಪ್ರೀತಿಯೇ ವಿಹಾರಿ ಆಯ್ಕೆ ಕಾರಣ ಎಂದು ಹಲವು ಕ್ರಿಕೆಟ್ ಪಂಡಿತರು ವಿಶ್ಲೇಷಿಸಿದ್ದಾರೆ. ಒಟ್ಟಾರೆ ಎಂಎಸ್‌ಕೆ ಪ್ರಸಾದ್ ಅವರು ಕನ್ನಡಿಗ ಕರುಣ್ ನಾಯರ್ ವಿಷಯದಲ್ಲಿ ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. 
ಇನ್ನು ಈ ಸಂಬಂಧ ಎಂಎಸ್‌ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದು ತನ್ನನ್ನು ಟೆಸ್ಟ್ ತಂಡದಿಂದ ಕೈಬಿಡಲಾಯಿತು ಎಂಬ ಕೊರಗಿನಿಂದ ಕರುಣ್ ಹೊರಬರಬೇಕು. ರಣಜಿ, ಭಾರತ ಎ ಸರಣಿಗಳಲ್ಲಿ ಆಡಿ ರನ್ ಹೊಳೆ ಹರಿಸುವತ್ತಾ ಗಮನ ಹರಿಸಬೇಕು ಎಂದು ಹೇಳಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT