ರಿಷಬ್‌ ಪಂತ್ 
ಕ್ರಿಕೆಟ್

ವೆಸ್ಟ್‌ ಇಂಡೀಸ್ ವಿರುದ್ಧ ಕೊನೆ ಟೆಸ್ಟ್: 2ನೇ ದಿನದಾಟದಂತ್ಯಕ್ಕೆ ಭಾರತ 308/4

ವೆಸ್ಟ್‌ ಇಂಡೀಸ್ ವಿರುದ್ಧದ ಎರಡನೇ ಹಾಗೂ ಕೊನೆಯ ಟೆಸ್ಟ್ ನ ಎರಡನೇ ದಿನದಾಟದಂತ್ಯಕ್ಕೆ ಭಾರತ ನಾಲ್ಕು ವಿಕೆಟ್‌...

ಹೈದರಾಬಾದ್: ವೆಸ್ಟ್‌ ಇಂಡೀಸ್ ವಿರುದ್ಧದ ಎರಡನೇ ಹಾಗೂ ಕೊನೆಯ ಟೆಸ್ಟ್ ನ ಎರಡನೇ ದಿನದಾಟದಂತ್ಯಕ್ಕೆ ಭಾರತ ನಾಲ್ಕು ವಿಕೆಟ್‌ ಕಳೆದುಕೊಂಡು 308 ರನ್‌ ಸೇರಿಸಿದೆ.
ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊನೆಯ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್‌ಇಂಡೀಸ್ 311ಕ್ಕೆ ಆಲೌಟ್ ಆಗಿದೆ.
ವೆಸ್ಟ್‌ಇಂಡೀಸ್ ನೀಡಿದ 311 ರನ್ ಗಳ ಗುರಿ ಬೆನ್ನತ್ತಿದ ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 308ರನ್ ಗಳಿಸಿದೆ. ಸದ್ಯ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಅಜಿಂಕ್ಯಾ ರಹಾನೆ 75 ಹಾಗೂ ರಿಷಬ್‌ ಪಂತ್ 85 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದಾರೆ. 
ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಅವರು ಕೇವಲ ನಾಲ್ಕು ರನ್‌ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಬಳಿಕ ತಂಡಕ್ಕೆ ಆಸರೆಯಾಗಿದ್ದ ಪೃಥ್ವಿ ಶಾ 53 ಎಸೆತಗಳಲ್ಲಿ ಭರ್ಜರಿ 70 ಗಳಿಸಿ, ಜೊಮೆಲ್ ವ್ಯಾರಿಕನ್ ಬೌಲಿಂಗ್‌ನಲ್ಲಿ ಶಿಮ್ರನ್ ಹೇಟ್ಮಯರ್‌ಗೆ ಕ್ಯಾಚಿತ್ತು ಪೆವಿಲಿಯನ್‌ಗೆ ಮರಳಿದರು. ಇದರ ಬೆನ್ನಲ್ಲೆ, ಚೇತೇಶ್ವರ್ ಪೂಜಾರ ಗೇಬ್ರಿಯಲ್ ಎಸೆತದಲ್ಲಿ ಹ್ಯಾಮಿಲ್ಟನ್‌ಗೆ ಕ್ಯಾಚಿತ್ತು ತಂಡವನ್ನು ಒತ್ತಡಕ್ಕೆ ಸಿಲುಕಿಸಿದರು.
ನಿನ್ನೆ ಮೊದಲ ದಿನದಾಟದ ಅಂತ್ಯಕ್ಕೆ  7 ವಿಕೆಟ್ ನಷ್ಟಕ್ಕೆ  295 ರನ್ ಗಳಿಸಿದ ವೆಸ್ಟ್ ಇಂಡೀಸ್ ಇಂದು 311 ರನ್ ಗಳಿಸುವಷ್ಟರಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು.
ವೆಸ್ಟ್ ಇಂಡೀಸ್ ಪರ ಶತಕಗಳಿಸಿದ ರೊಸ್ಟನ್ ಚೆಸ್,  ಶಾಹಿ ಹೋಪ್  ವಿಕೆಟ್ ಗಳನ್ನು   ಉಮೇಶ್ ಯಾದವ್ ಪಡೆದರೆ,  ಅಶ್ವಿನ್ ಬೌಲಿಂಗ್ ನಲ್ಲಿ  ರವಿಂದ್ರ ಜಡೇಜಾಗೆ ಕಿರನ್ ಪೊವೆಲ್ ಕ್ಯಾಚ್ ನೀಡಿ ನಿರ್ಗಮಿಸಿದರು. ಇನ್ನೂ ಕುಲದೀಪ್ ಯಾದವ್  ಶಿಮ್ರಾನ್ ಹೆಟ್ ಮೈರ್,  ಕೆ.ಬ್ರಾಥ್ ವೈಟ್ ಅವರನ್ನು ಎಲ್ ಬಿ ಡಬ್ಲ್ಯೂ ಬಲೆಗೆ ಕೆಡವಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT