ಕ್ರಿಕೆಟ್

ಅಂಬಾಟಿ ರಾಯುಡು ಸ್ಥಿರತೆಯಿಂದ ನಮ್ಮ ಮಧ್ಯಮ-ಕ್ರಮಾಂಕದ ಗೊಂದಲಕ್ಕೆ ಪರಿಹಾರ: ಕೊಹ್ಲಿ

ಆಂಬಟಿ ರಾಯುಡು ಸ್ಥಿರತೆಯ ಪ್ರದರ್ಶನ ನೀಡುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ವಿರಾಟ್ ಕೊಹ್ಲಿ, ರಾಯುಡು ಸ್ಥಿರತೆ ಕಾಯ್ದುಕೊಂಡಿರುವುದು ಮಧ್ಯಮ ಕ್ರಮಾಂಕದ ಬ್ಯಾಟ್ಮ್ಸ್ಮನ್ ಗೊಂದಲವನ್ನು ಪರಿಹರಿಸಲಿದೆ ಎಂದು ಹೇಳಿದ್ದಾರೆ.

ಗುವಾಹಟಿ: ಆಂಬಟಿ ರಾಯುಡು ಸ್ಥಿರತೆಯ ಪ್ರದರ್ಶನ ನೀಡುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ವಿರಾಟ್ ಕೊಹ್ಲಿ,  ರಾಯುಡು ಸ್ಥಿರತೆ ಕಾಯ್ದುಕೊಂಡಿರುವುದು ಮಧ್ಯಮ ಕ್ರಮಾಂಕದ ಬ್ಯಾಟ್ಮ್ಸ್ಮನ್  ಗೊಂದಲವನ್ನು ಪರಿಹರಿಸಲಿದೆ ಎಂದು ಹೇಳಿದ್ದಾರೆ. 
ಮುಂದಿನ ವಿಶ್ವಕಪ್ ಗೂ ಮುನ್ನ ಅಂಬಟಿ ರಾಯುಡು 4 ನೇ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡುವ ಸ್ಥಿರತೆಯನ್ನು ಕಾಯ್ದುಕೊಂಡಿದ್ದಾರೆ. ಈ ವರೆಗೂ ಮಧ್ಯಮ ಕ್ರಮಾಂಕದ ಬ್ಯಾಟ್ಮ್ಸ್ಮನ್ ಆಯ್ಕೆ ಮಾಡುವ ಗೊಂದಲ ಉಂಟಾಗಿತ್ತು. ಆದರೆ ಆಂಬಟಿ ರಾಯುಡು ಸ್ಥಿರತೆ ಕಾಯ್ದುಕೊಂಡಿರುವುದು ಗೊಂದಲಕ್ಕೆ ಪರಿಹಾರ ಸಿಕ್ಕಂತಾಗಿದೆ ಎಂದು ಕೊಹ್ಲಿ ಹೇಳಿದ್ದಾರೆ. 
ನಾಲ್ಕನೇ ಕ್ರಮಾಂಕದಲ್ಲಿ ಆಡಲು ಹಲವು ಆಟಗಾರರಿಗೆ ಅವಕಾಶ ನೀಡಲಾಗಿತ್ತು. ಆದರೆ ಅವರ್ಯಾರೂ ಸೂಕ್ತವಾಗಿ ಹೊಂದಾಣಿಕೆ ಆಗಲಿಲ್ಲ. ಇತ್ತೀಚಿನ ದಿನಗಳಲ್ಲಿ ಆಂಬಟಿ ರಾಯುಡು ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 
ಏಷ್ಯಾಕಪ್ ನಲ್ಲಿಯೂ ಆಂಬಟಿ ರಾಯುಡು ಉತ್ತಮ ಪ್ರದರ್ಶನ ನೀಡಿದ್ದರು ಮುಂದಿನ ವರ್ಲ್ಡ್ ಕಪ್ ವರೆಗೂ ಆಂಬಟಿ ರಾಯುಡುಗೆ ಕಾಲಾವಕಾಶ ನೀಡಬೇಕಾಗುತ್ತದೆ ಎಂದು ಕೊಹ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT