ಎಂಎಸ್ ಧೋನಿ-ಸೌರವ್ ಗಂಗೂಲಿ 
ಕ್ರಿಕೆಟ್

ಕಳಪೆ ಫಾರ್ಮ್: ಎಂಎಸ್ ಧೋನಿಯನ್ನು ಟಿ20 ಸರಣಿಯಿಂದ ಹೊರಗಿಟ್ಟಿದ್ದು ಅತ್ಯುತ್ತಮ ನಿರ್ಧಾರ: ಸೌರವ್ ಗಂಗೂಲಿ

ಪ್ರವಾಸಿ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿಯನ್ನು ಆಯ್ಕೆ ಮಾಡದಿರುವುದು ಒಳ್ಳೆಯ...

ಮುಂಬೈ: ಪ್ರವಾಸಿ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿಯನ್ನು ಆಯ್ಕೆ ಮಾಡದಿರುವುದು ಒಳ್ಳೆಯ ನಿರ್ಧಾರ ಎಂದು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. 
ಎಂಎಸ್ ಧೋನಿ ಅವರನ್ನು ಎರಡು ಟಿ20 ಸರಣಿಯಿಂದ ಬಿಸಿಸಿಐ ಆಯ್ಕೆ ಸಮಿತಿ ಕೈ ಬಿಟ್ಟಿದ್ದು ಆಶ್ಚರ್ಯಕರ ವಿಷಯವೆನಲ್ಲ. ಇದು ಉತ್ತಮ ನಿರ್ಧಾರ. ಅವರು ಫಾರ್ಮ್ ಕಳೆದುಕೊಂಡಿದ್ದಾರೆ. ರನ್ ಗಳಿಸಲು ಪರದಾಡುತ್ತಿದ್ದಾರೆ. ಅಲ್ಲದೆ ಧೋನಿ ಅವರು 2020ರ ವಿಶ್ವಕಪ್ ಟಿ20ಯಲ್ಲಿ ಆಡುವುದು ಅನುಮಾನ. ಹೀಗಾಗಿ ಭಾರತಕ್ಕೆ ಬದಲಿ ಕೀಪರ್ ನ ಅಗತ್ಯವಿದೆ. ಅದಕ್ಕಾಗಿ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿದ್ದು ಧೋನಿಯನ್ನು ಕೈ ಬಿಟ್ಟು ಉತ್ತಮ ಫಾರ್ಮ್ ನಲ್ಲಿರುವ ರಿಷಬ್ ಪಂತ್ ಗೆ ಸ್ಥಾನ ನೀಡಲಾಗಿದೆ ಎಂದರು. 
ಇತ್ತೀಚೆಗಷ್ಟೆ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಟೆಸ್ಟ್ ಸರಣಿಗೆ 15 ಸದಸ್ಯರನ್ನು ಒಳಗೊಂಡ ಟೀಂ ಇಂಡಿಯಾ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಮಧ್ಯಾಹ್ನ 2.30ಕ್ಕೆ ರಾಜೀನಾಮೆ; ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT