ವಿರಾಟ್ ಕೊಹ್ಲಿ 
ಕ್ರಿಕೆಟ್

5ನೇ ಟೆಸ್ಟ್: ಸಂಕಷ್ಟದಲ್ಲಿ ಭಾರತ, 2ನೇ ದಿನದಾಂತ್ಯಕ್ಕೆ 174/6

ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತದ ಕಳಪೆ ಬ್ಯಾಟಿಂಗ್ ಪ್ರದರ್ಶನ ಮುಂದುವರೆದಿದ್ದು, ಐದನೇ ಹಾಗೂ ಅಂತಿಮ...

ಓವಲ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತದ ಕಳಪೆ ಬ್ಯಾಟಿಂಗ್ ಪ್ರದರ್ಶನ ಮುಂದುವರೆದಿದ್ದು, ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದೆ.
ಲಂಡನ್​​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಒಡ್ಡಿದ 332 ರನ್ ಗಳ ಟಾರ್ಗೆಟ್ ಬೆನ್ನತ್ತಿದ ಭಾರತ,  51 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 174 ರನ್ ಗಳಿಸುವ ಮೂಲಕ 158 ರನ್ ಗಳ ಭಾರಿ ಹಿನ್ನಡೆ ಅನುಭವಿಸಿದೆ.
ಭಾರತಕ್ಕೆ ಆರಂಭದಲ್ಲೇ ಶಿಖರ್ ಧವನ್(3), ವಿಕೆಟ್ ನಷ್ಟ, ಬಳಿಕ ರಾಹುಲ್​​​-ಪೂಜಾರ ಉತ್ತಮ ಜೊತೆಯಾಟದ ನಿರೀಕ್ಷೆಯನ್ನು ಹುಸಿಗೊಳಿಸಿದರು. ಕೆ.ಎಲ್ ರಾಹುಲ್ 37ರನ್​ಗಳಿಸಿದ್ದಾಗ ಸ್ಯಾಮ್ ಕರನ್​ಗೆ ವಿಕೆಟ್ ಒಪ್ಪಿಸಿದರೆ, ಉತ್ತಮವಾಗೇ ಆಡುತ್ತಿದ್ದ ಪೂಜಾರ(37) ಜೇಮ್ಸ್ ಆ್ಯಂಡರ್ಸನ್ ಬೌಲಿಂಗ್​ನಲ್ಲಿ ಕೀಪರ್​​ಗೆ ಕ್ಯಾಚಿತ್ತು ಪೆವಿಲಿಯನ್​ ಸೇರಿಕೊಂಡರು. ಇದರ ಬೆನ್ನಲ್ಲೆ ಅಜಿಂಕ್ಯ ರಹಾನೆ ಸೊನ್ನೆ ಸುತ್ತಿದ್ದು ಭಾರತಕ್ಕೆ ಮತ್ತಷ್ಟು ಹೊಡೆತ ನೀಡಿತು. ಬಳಿಕ ನಾಯಕ ವಿರಾಟ್​ ಕೊಹ್ಲಿ ಹಾಗೂ ಹನುಮ ವಿಹಾರಿ ಎಚ್ಚರಿಕೆಯ ಇನ್ನಿಂಗ್ಸ್​ ಕಟ್ಟಲು ಮುಂದಾದರು. ಆದರೆ ಕೊಹ್ಲಿ 49 ರನ್​ಗೆ ಔಟ್ ಆಗುವ ಮೂಲಕ ತಂಡಕ್ಕೆ ಆಘಾತ ನೀಡಿದರೆ, ಕೊಹ್ಲಿ ಬೆನ್ನಲ್ಲೆ ರಿಷಭ್ ಪಂತ್ 5 ರನ್​ಗೆ ಪೆವಿಲಿಯನ್ ಹಾದಿ ಹಿಡಿದರು.
ಮೊದಲ ಅಂತರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಹನುಮ ವಿಹಾರಿ 25 ಹಾಗೂ ರವೀಂದ್ರ ಜಡೇಜಾ 8 ರನ ಬಾರಿಸಿ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. 
ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್ ಹಾಗೂ ಬೆನ್ ಸ್ಟೋಕ್ಸ್ ತಲಾ 2 ವಿಕೆಟ್ ಕಿತ್ತರೆ, ಸ್ಟುವರ್ಟ್ ಬ್ರಾಡ್ ಹಾಗೂ ಸ್ಯಾಮ್ ಕುರ್ರನ್ 1 ವಿಕೆಟ್ ಪಡೆದರು.
ಭಾರತ ಪರ ರವೀಂದ್ರ ಜಡೇಜಾ 4 ವಿಕೆಟ್ ಕಿತ್ತು ಮಿಂಚಿದರೆ, ಇಶಾಂತ್ ಶರ್ಮಾ ಹಾಗೂ ಜಸ್​ಪ್ರೀತ್ ಬುಮ್ರಾ ತಲಾ 3 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT