ಟೀಂ ಇಂಡಿಯಾ 
ಕ್ರಿಕೆಟ್

ಟೀಂ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡದಿದ್ದರೆ, ಮುಲಾಜಿಲ್ಲದೆ ಕಿತ್ತೆಸೆಯಲಾಗುವುದು: ಎಂಎಸ್‌ಕೆ ಪ್ರಸಾದ್

ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದರ ವಿರುದ್ಧ ಆಕ್ರೋಶಗೊಂಡಿರುವ ಆಯ್ಕೆ ಸಮಿತಿ ಇನ್ಮುಂದೆ ಉತ್ತಮ ಪ್ರದರ್ಶನ ನೀಡಿದ್ದರಂತೆ ಅಂತಹ ಆಟಗಾರರನ್ನು ಮುಲಾಜಿಲ್ಲದೆ ಕಿತ್ತೆಸೆಯಲಾಗುವುದು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ಹೇಳಿದ್ದಾರೆ.

ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದರ ವಿರುದ್ಧ ಆಕ್ರೋಶಗೊಂಡಿರುವ ಆಯ್ಕೆ ಸಮಿತಿ ಇನ್ಮುಂದೆ ಉತ್ತಮ ಪ್ರದರ್ಶನ ನೀಡಿದ್ದರಂತೆ ಅಂತಹ ಆಟಗಾರರನ್ನು ಮುಲಾಜಿಲ್ಲದೆ ಕಿತ್ತೆಸೆಯಲಾಗುವುದು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ಹೇಳಿದ್ದಾರೆ. 
ಟೆಸ್ಟ್ ಕ್ರಿಕೆಟ್ ನಲ್ಲಿ ನಂಬರ್ ತಂಡವಾಗಿದ್ದರು ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-4 ಅಂತರದಿಂದ ಹೀನಾಯ ಸೋಲು ಕಂಡು ಸರಣಿಯನ್ನು ಕೈಚೆಲ್ಲಿತ್ತು. ಪಂದ್ಯಗಳಲ್ಲಿ ಆಟಗಾರರ ಕಳಪೆ ಪ್ರದರ್ಶನದ ವಿರುದ್ಧ ಆಕ್ರೋಶಗೊಂಡಿರುವ ಆಯ್ಕೆ ಸಮಿತಿ ಆಟಗಾರರಿಗೆ ಕಟ್ಟೆಚ್ಚರದ ನಿರ್ದೇಶನವನ್ನು ನೀಡಿದೆ. 
ಇನ್ಮುಂದೆ ಉತ್ತಮ ಪ್ರದರ್ಶನ ನೀಡದ ಆಟಗಾರರಿಗೆ ಮತ್ತೊಂದು ಅವಕಾಶ ನೀಡುವುದಿಲ್ಲ. ಅದರ ಬದಲಿಗೆ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕಾಗುತ್ತದೆ ಎಂದು ಎಂಎಸ್‌ಕೆ ಪ್ರಸಾದ್ ಹೇಳಿದ್ದಾರೆ. 
ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಐದು ಟೆಸ್ಟ್ ಪಂದ್ಯಗಳಲ್ಲಿ 60ಕ್ಕೂ ಹೆಚ್ಚು ವಿಕೆಟ್ ಗಳನ್ನು ಪಡೆದಿದ್ದಾರೆ. ಇದೇ ವೇಳೆ ಅತ್ಯುತ್ತಮ ಕ್ಯಾಚ್ ಗಳನ್ನು ಹಿಡಿಯಲಾಗಿದೆ. ಆದರೆ ಬ್ಯಾಟಿಂಗ್ ನಲ್ಲಿ ಮಾತ್ರ ಹೇಳಿಕೊಳ್ಳುವಂತಾ ಪ್ರದರ್ಶನ ಕಂಡುಬರಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT