ಕ್ರಿಕೆಟ್

ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್: ತಂಡಕ್ಕೆ ಮರಳಿದ ಪಾಂಡ್ಯ, ಬೂಮ್ರಾ

Srinivas Rao BV
ನವದೆಹಲಿ: ದುಬೈ ನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ 2018 ರ ಭಾರತ-ಪಾಕ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 
ಕ್ರೀಡಾಂಗಣ ಉತ್ತಮ ಬ್ಯಾಟಿಂಗ್ ಪಿಚ್ ಆಗಿದ್ದು, ಹೆಚ್ಚು ರನ್ ಗಳಿಸುವ ಗುರಿ ಹೊಂದಿದ್ದೇವೆ ಎಂದು ಪಾಕಿಸ್ತನಾ ತಂಡದ ನಾಯಕ ಸರ್ಫರಾಜ್ ಹೇಳಿದ್ದಾರೆ.  ಇದೇ ವೇಳೆ ಭಾರತ ತಂಡದಲ್ಲಿ ಬದಲಾವಣೆ ಮಾಡಲಾಗಿದ್ದು, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್ ಬದಲು ಜಸ್ಪ್ರೀತ್ ಬೂಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಅವರು ತಂಡಕ್ಕೆ ಮರಳಿದ್ದಾರೆ. 
SCROLL FOR NEXT