ಕ್ರಿಕೆಟ್

ಅಫ್ಘಾನಿಸ್ಥಾನ ವಿರುದ್ಧದ ಪಂದ್ಯ: ಭಾರತದ ಗೆಲುವಿಗೆ ಮುಳುವಾದ ಅಂಪೈರ್ ವೈಫಲ್ಯದ ಬಗ್ಗೆ ಧೋನಿ ಹೇಳಿದ್ದು?

ಏಷ್ಯಾಕಪ್ 2018 ರ ಅಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ ಭಾರತದ ಗೆಲುವಿಗೆ ಮುಳುವಾಗಿದ್ದು, ಅಂಪೈರ್ ನ ತಪ್ಪು ನಿರ್ಧಾರಗಳೇ ಕಾರಣವಾಗಿದ್ದು, ಈ ಬಗ್ಗೆ ಎಂಎಸ್ ಧೋನಿ ಮೌನ ಮುರಿದಿದ್ದಾರೆ.

ದುಬೈ: ಏಷ್ಯಾಕಪ್ 2018 ರ ಅಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ ಭಾರತದ ಗೆಲುವಿಗೆ ಮುಳುವಾಗಿದ್ದು, ಅಂಪೈರ್ ನ ತಪ್ಪು ನಿರ್ಧಾರಗಳೇ ಕಾರಣವಾಗಿದ್ದು, ಈ ಬಗ್ಗೆ ಎಂಎಸ್ ಧೋನಿ ಮೌನ ಮುರಿದಿದ್ದಾರೆ. 
ಅಂಪೈರ್ ಗಳ ತಪ್ಪು ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂಎಸ್ ಧೋನಿ "ನನಗೆ ದಂಡ ಪಾವತಿಸುವುದು ಬೇಕಿಲ್ಲ" ಎಂದು ಹೇಳುವ ಮೂಲಕ ಅಂಪೈರ್ ಗಳ ತಪ್ಪು ನಿರ್ಧಾರದ ಬಗ್ಗೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಭಾರತದ ಇನ್ನಿಂಗ್ಸ್ ನ 26ನೇ ಓವರ್ ನಲ್ಲಿ ಧೋನಿ ಜಾವೆದ್ ಅಹ್ಮಾದಿ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು ಔಟ್ ಆದರು. ಆದರೆ ಟಿವಿ ರಿಪ್ಲೆ ನಲ್ಲಿ ಧೋನಿ ಔಟ್ ಆಗಿರಲಿಲ್ಲ. ಅಹ್ಮಾದಿ ಎಸೆದ ಚೆಂಡು ಲೆಗ್ ಸ್ಟಂಪ್ ನಿಂದ ಆಚೆಗೆ ಹೋಗಿತ್ತು, ಈ ವಿಚಾರ ಧೋನಿಗೆ ತಿಳಿದಿತ್ತಾದರೂ, ರಿವ್ಯೂ ಅವಕಾಶ ಇಲ್ಲವಾಗಿದ್ದರಿಂದ ಧೋನಿಗೆ ರಿವ್ಯೂ ಪಡೆಯದೇ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಅಂತೆಯೇ 44 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಕಾರ್ತಿಕ್ ಕೂಡ ನಬಿ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದು ಔಟ್ ಆಗಿದ್ದರು. ಆದರೆ ಇದೂ ಕೂಡ ಔಟ್ ಆಗಿರಲಿಲ್ಲ.  ಈ ಹಿನ್ನೆಲೆಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬಂದಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT