ಕ್ರಿಕೆಟ್

ಅಫ್ಘಾನಿಸ್ಥಾನ ವಿರುದ್ಧದ ಪಂದ್ಯ: ಭಾರತದ ಗೆಲುವಿಗೆ ಮುಳುವಾದ ಅಂಪೈರ್ ವೈಫಲ್ಯದ ಬಗ್ಗೆ ಧೋನಿ ಹೇಳಿದ್ದು?

ಏಷ್ಯಾಕಪ್ 2018 ರ ಅಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ ಭಾರತದ ಗೆಲುವಿಗೆ ಮುಳುವಾಗಿದ್ದು, ಅಂಪೈರ್ ನ ತಪ್ಪು ನಿರ್ಧಾರಗಳೇ ಕಾರಣವಾಗಿದ್ದು, ಈ ಬಗ್ಗೆ ಎಂಎಸ್ ಧೋನಿ ಮೌನ ಮುರಿದಿದ್ದಾರೆ.

ದುಬೈ: ಏಷ್ಯಾಕಪ್ 2018 ರ ಅಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ ಭಾರತದ ಗೆಲುವಿಗೆ ಮುಳುವಾಗಿದ್ದು, ಅಂಪೈರ್ ನ ತಪ್ಪು ನಿರ್ಧಾರಗಳೇ ಕಾರಣವಾಗಿದ್ದು, ಈ ಬಗ್ಗೆ ಎಂಎಸ್ ಧೋನಿ ಮೌನ ಮುರಿದಿದ್ದಾರೆ. 
ಅಂಪೈರ್ ಗಳ ತಪ್ಪು ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂಎಸ್ ಧೋನಿ "ನನಗೆ ದಂಡ ಪಾವತಿಸುವುದು ಬೇಕಿಲ್ಲ" ಎಂದು ಹೇಳುವ ಮೂಲಕ ಅಂಪೈರ್ ಗಳ ತಪ್ಪು ನಿರ್ಧಾರದ ಬಗ್ಗೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಭಾರತದ ಇನ್ನಿಂಗ್ಸ್ ನ 26ನೇ ಓವರ್ ನಲ್ಲಿ ಧೋನಿ ಜಾವೆದ್ ಅಹ್ಮಾದಿ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು ಔಟ್ ಆದರು. ಆದರೆ ಟಿವಿ ರಿಪ್ಲೆ ನಲ್ಲಿ ಧೋನಿ ಔಟ್ ಆಗಿರಲಿಲ್ಲ. ಅಹ್ಮಾದಿ ಎಸೆದ ಚೆಂಡು ಲೆಗ್ ಸ್ಟಂಪ್ ನಿಂದ ಆಚೆಗೆ ಹೋಗಿತ್ತು, ಈ ವಿಚಾರ ಧೋನಿಗೆ ತಿಳಿದಿತ್ತಾದರೂ, ರಿವ್ಯೂ ಅವಕಾಶ ಇಲ್ಲವಾಗಿದ್ದರಿಂದ ಧೋನಿಗೆ ರಿವ್ಯೂ ಪಡೆಯದೇ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಅಂತೆಯೇ 44 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಕಾರ್ತಿಕ್ ಕೂಡ ನಬಿ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದು ಔಟ್ ಆಗಿದ್ದರು. ಆದರೆ ಇದೂ ಕೂಡ ಔಟ್ ಆಗಿರಲಿಲ್ಲ.  ಈ ಹಿನ್ನೆಲೆಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬಂದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT