ಕೆಎಲ್ ರಾಹುಲ್, ಎಂಎಸ್ ಧೋನಿ 
ಕ್ರಿಕೆಟ್

ಎಂಎಸ್ ಧೋನಿ ಔಟಾಗಿದ್ದಕ್ಕೆ ಅಭಿಮಾನಿಗಳು ಕೆಎಲ್ ರಾಹುಲ್‌ರನ್ನು ಬಲಿಪಶು ಮಾಡಿದ್ದೇಕೆ?

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಪಂದ್ಯದಲ್ಲಿ ಟೀಂ ಇಂಡಿಯಾ ಟೈ ಸಾಧಿಸಿತ್ತು. ಇನ್ನು ಪಂದ್ಯದಲ್ಲಿ ಎಂಎಸ್ ಧೋನಿ...

ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಪಂದ್ಯದಲ್ಲಿ ಟೀಂ ಇಂಡಿಯಾ ಟೈ ಸಾಧಿಸಿತ್ತು. ಇನ್ನು ಪಂದ್ಯದಲ್ಲಿ ಎಂಎಸ್ ಧೋನಿ ಔಟಾಗಿದ್ದಕ್ಕೆ ಅಭಿಮಾನಿಗಳು ಕೆಎಲ್ ರಾಹುಲ್ ರನ್ನು ಬಲಿಪಶು ಮಾಡಿದ್ದಾರೆ. 
ಆಫ್ಘಾನ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕರಾಗಿದ್ದ ಎಂಎಸ್ ಧೋನಿ ಮತ್ತು ದಿನೇಶ್ ಕಾರ್ತಿಕ್ ತಪ್ಪು ಎಲ್ಬಿಡಬ್ಲ್ಯೂ ತೀರ್ಪಿಗೆ ಬಲಿಯಾಗಿದ್ದರು. ಇಬ್ಬರಿಗೂ ಡಿಆರ್ಎಸ್(ಅಂಪೈರ್ ತೀರ್ಪು ಮರುಪರಿಶೀಲನೆ) ಮನವಿ ಸಲ್ಲಿಸಲು ಅವಕಾಶವಿಲ್ಲದಿದ್ದರಿಂದ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದ್ದರು. ಇದು ಧೋನಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. 
ಎಂಎಸ್ ಧೋನಿ 200ನೇ ಪಂದ್ಯಕ್ಕೆ ನಾಯಕತ್ವ ವಹಿಸಿದ್ದು ಅವರು ಔಟಾಗಲು ಕೆಎಲ್ ರಾಹುಲ್ ಕಾರಣವೆಂದು ಹಿಗ್ಗಾಮುಗ್ಗಾ ಟೀಕಿಸಿದ್ದಾರೆ. 8 ರನ್ ಗಳಿಸಿದ್ದ ಧೋನಿ 26ನೇ ಓವರ್ ನಲ್ಲಿ ಎಲ್ಬಿಗೆ ಬಲಿಯಾದರು. ಇದಕ್ಕೂ ಮುನ್ನ 21ನೇ ಓವರ್ ನಲ್ಲಿ ಕೆಎಲ್ ರಾಹುಲ್ ಔಟಾಗಿದ್ದರು. ಡಿಆರ್ಎಸ್ ಗೆ ಮನವಿ ಮಾಡಿದ್ದು ಧೋನಿ ಡಿಆರ್ಎಸ್ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಟೀಕಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT