ಪಾಕ್ ಕ್ರಿಕೆಟ್ ತಂಡ 
ಕ್ರಿಕೆಟ್

ಭಾರತ ವಿರುದ್ಧ ಮುಖಭಂಗಕ್ಕೆ ಹೆದರಿ ಬಾಂಗ್ಲಾದೇಶಕ್ಕೆ ಶರಣಾಯ್ತಾ ಪಾಕಿಸ್ತಾನ?

ಏಷ್ಯಾಕಪ್ ಚಾಂಪಿಯನ್ ಪಟ್ಟಕ್ಕಾಗಿ ನಾಳೆ ಭಾರತ ಹಾಗೂ ಬಾಂಗ್ಲಾದೇಶ ಸೆಣೆಸಾಡಲಿವೆ. ಇನ್ನು ನಿನ್ನೆಯ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ್ದ ಅಲ್ಪಮೊತ್ತವನ್ನು ಬಾರಿಸಿ...

ದುಬೈ: ಏಷ್ಯಾಕಪ್ ಚಾಂಪಿಯನ್ ಪಟ್ಟಕ್ಕಾಗಿ ನಾಳೆ ಭಾರತ ಹಾಗೂ ಬಾಂಗ್ಲಾದೇಶ ಸೆಣೆಸಾಡಲಿವೆ. ಇನ್ನು ನಿನ್ನೆಯ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ್ದ ಅಲ್ಪಮೊತ್ತವನ್ನು ಬಾರಿಸಿ ಫೈನಲ್ ತಲುಪುವ ಸುವರ್ಣಾವಕಾಶವನ್ನು ಬಲಿಷ್ಠ ಪಾಕಿಸ್ತಾನ ಕೈಚೆಲ್ಲಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 
ನಿನ್ನೆ ನಡೆದ ಏಷ್ಯಾಕಪ್ ಸೂಪರ್ 4 ಹಂತದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು ಫೈನಲ್ ಹಂತ ಪ್ರವೇಶಕ್ಕಾಗಿ ಸೆಣೆಸಾಟ ನಡೆಸಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶಕ್ಕೆ ಮುಶ್ಫಿಕರ್ ರಹೀಂ(99) ಹಾಗೂ ಮೊಹಮ್ಮದ್ ಮಿಥುನ್(60) ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಬಾಂಗ್ಲಾದೇಶ 239 ರನ್ ಪೇರಿಸಲು ಸಾಧ್ಯವಾಯಿತು. 
ಬಾಂಗ್ಲಾದೇಶ ನೀಡಿದ 240 ರನ್ ಗಳು ಗುರಿ ಬೆನ್ನಟ್ಟಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 202 ರನ್ ಮಾತ್ರ ಪೇರಿಸಲು ಶಕ್ತವಾಯಿತು. ಇದರೊಂದಿಗೆ ಪಾಕ್ ಬಾಂಗ್ಲಾ ವಿರುದ್ಧ 37 ರನ್ ಗಳ ಹೀನಾಯ ಸೋಲು ಕಂಡಿತು. 
ಇನ್ನು ಅಲ್ಪಮೊತ್ತವನ್ನು ಬೆನ್ನಟ್ಟಿ ಫೈನಲ್ ಪ್ರವೇಶಿಸುವ ಸುವರ್ಣಾವಕಾಶವನ್ನು ಪಾಕಿಸ್ತಾನ ಕಳೆದುಕೊಂಡಿದೆ. ಪಾಕ್ ಫೈನಲ್ ಪ್ರವೇಶಿಸಿದ್ದರೆ ಭಾರತ ಹಾಗೂ ಪಾಕಿಸ್ತಾನ ನಡುವೆ ಜಿದ್ದಾಜಿದ್ದಿನ ಹೋರಾಟ ಕಾಣಬಹುದಾಗಿತ್ತು. 
ಇನ್ನು ಪಾಕಿಸ್ತಾನ ಅಲ್ಪಮೊತ್ತವನ್ನು ಬಾರಿಸದೆ ಬಾಂಗ್ಲಾದೇಶಕ್ಕೆ ಶರಣಾಗಿರುವುದು ಫೈನಲ್ ನಲ್ಲಿ ಭಾರತ ವಿರುದ್ಧದ ಸೋಲಿನ ಮುಖಭಂಗವನ್ನು ತಪ್ಪಿಸಿಕೊಳ್ಳುವ ಸಲುವಾಗಿ ಬಾಂಗ್ಲಾಗೆ ಶರಣಾಗಿದೆ ಎಂಬ ಅನುಮಾನಗಳು ಮೂಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT