ಪಾಕ್ ಕ್ರಿಕೆಟ್ ತಂಡ 
ಕ್ರಿಕೆಟ್

ಭಾರತ ವಿರುದ್ಧ ಮುಖಭಂಗಕ್ಕೆ ಹೆದರಿ ಬಾಂಗ್ಲಾದೇಶಕ್ಕೆ ಶರಣಾಯ್ತಾ ಪಾಕಿಸ್ತಾನ?

ಏಷ್ಯಾಕಪ್ ಚಾಂಪಿಯನ್ ಪಟ್ಟಕ್ಕಾಗಿ ನಾಳೆ ಭಾರತ ಹಾಗೂ ಬಾಂಗ್ಲಾದೇಶ ಸೆಣೆಸಾಡಲಿವೆ. ಇನ್ನು ನಿನ್ನೆಯ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ್ದ ಅಲ್ಪಮೊತ್ತವನ್ನು ಬಾರಿಸಿ...

ದುಬೈ: ಏಷ್ಯಾಕಪ್ ಚಾಂಪಿಯನ್ ಪಟ್ಟಕ್ಕಾಗಿ ನಾಳೆ ಭಾರತ ಹಾಗೂ ಬಾಂಗ್ಲಾದೇಶ ಸೆಣೆಸಾಡಲಿವೆ. ಇನ್ನು ನಿನ್ನೆಯ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ್ದ ಅಲ್ಪಮೊತ್ತವನ್ನು ಬಾರಿಸಿ ಫೈನಲ್ ತಲುಪುವ ಸುವರ್ಣಾವಕಾಶವನ್ನು ಬಲಿಷ್ಠ ಪಾಕಿಸ್ತಾನ ಕೈಚೆಲ್ಲಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 
ನಿನ್ನೆ ನಡೆದ ಏಷ್ಯಾಕಪ್ ಸೂಪರ್ 4 ಹಂತದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು ಫೈನಲ್ ಹಂತ ಪ್ರವೇಶಕ್ಕಾಗಿ ಸೆಣೆಸಾಟ ನಡೆಸಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶಕ್ಕೆ ಮುಶ್ಫಿಕರ್ ರಹೀಂ(99) ಹಾಗೂ ಮೊಹಮ್ಮದ್ ಮಿಥುನ್(60) ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಬಾಂಗ್ಲಾದೇಶ 239 ರನ್ ಪೇರಿಸಲು ಸಾಧ್ಯವಾಯಿತು. 
ಬಾಂಗ್ಲಾದೇಶ ನೀಡಿದ 240 ರನ್ ಗಳು ಗುರಿ ಬೆನ್ನಟ್ಟಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 202 ರನ್ ಮಾತ್ರ ಪೇರಿಸಲು ಶಕ್ತವಾಯಿತು. ಇದರೊಂದಿಗೆ ಪಾಕ್ ಬಾಂಗ್ಲಾ ವಿರುದ್ಧ 37 ರನ್ ಗಳ ಹೀನಾಯ ಸೋಲು ಕಂಡಿತು. 
ಇನ್ನು ಅಲ್ಪಮೊತ್ತವನ್ನು ಬೆನ್ನಟ್ಟಿ ಫೈನಲ್ ಪ್ರವೇಶಿಸುವ ಸುವರ್ಣಾವಕಾಶವನ್ನು ಪಾಕಿಸ್ತಾನ ಕಳೆದುಕೊಂಡಿದೆ. ಪಾಕ್ ಫೈನಲ್ ಪ್ರವೇಶಿಸಿದ್ದರೆ ಭಾರತ ಹಾಗೂ ಪಾಕಿಸ್ತಾನ ನಡುವೆ ಜಿದ್ದಾಜಿದ್ದಿನ ಹೋರಾಟ ಕಾಣಬಹುದಾಗಿತ್ತು. 
ಇನ್ನು ಪಾಕಿಸ್ತಾನ ಅಲ್ಪಮೊತ್ತವನ್ನು ಬಾರಿಸದೆ ಬಾಂಗ್ಲಾದೇಶಕ್ಕೆ ಶರಣಾಗಿರುವುದು ಫೈನಲ್ ನಲ್ಲಿ ಭಾರತ ವಿರುದ್ಧದ ಸೋಲಿನ ಮುಖಭಂಗವನ್ನು ತಪ್ಪಿಸಿಕೊಳ್ಳುವ ಸಲುವಾಗಿ ಬಾಂಗ್ಲಾಗೆ ಶರಣಾಗಿದೆ ಎಂಬ ಅನುಮಾನಗಳು ಮೂಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT