ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ವಿರಾಟ್ ಕೊಹ್ಲಿ, ಬೂಮ್ರಾ 
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ವಿರಾಟ್ ಕೊಹ್ಲಿ, ಬೂಮ್ರಾ

ಸೋಮವಾರ ಐಸಿಸಿ ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಹಾಗೂ ವೇಗಿ ಜಸ್ಪ್ರೀತ್‌ ಬೂಮ್ರಾ ಅವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ....

ದುಬೈ: ಸೋಮವಾರ ಐಸಿಸಿ ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಹಾಗೂ ವೇಗಿ ಜಸ್ಪ್ರೀತ್‌ ಬೂಮ್ರಾ ಅವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಕ್ರಮವಾಗಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ,  890 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿ ಉಳಿದುಕೊಂಡರೆ, ಉಪ ನಾಯಕ ರೋಹಿತ್‌ ಶರ್ಮಾ 839 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಜಸ್ಪ್ರೀತ್‌ ಬೂಮ್ರಾ 774 ಅಂಕಗಳೊಂದಿಗೆ ಅಗ್ರ ಸ್ಥಾನ ಪಡೆದರೆ, ಕುಲ್ದೀಪ್‌ ಯಾದವ್‌ ಹಾಗೂ ಯಜುವೇಂದ್ರ ಚಾಹಲ್‌ ಅಗ್ರ 10ರಲ್ಲಿ ಕಾಣಿಸಿಕೊಂಡಿದ್ದಾರೆ.
ಚೈನಾಮನ್‌ ಶೈಲಿಯ ಕುಲ್ದೀಪ್‌ 689 ಅಂಕಗಳೊಂದಿಗೆ 7ನೇ ಸ್ಥಾನ ಹಾಗೂ 680 ಅಂಕಗಳೊಂದಿಗೆ ಚಾಹಲ್‌ 8ನೇ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ನಾಯಕ ಆ್ಯರೋನ್‌ ಫಿಂಚ್, ಇತ್ತೀಚೆಗೆ ಮುಕ್ತಾಯವಾದ ಪಾಕಿಸ್ತಾನದ ವಿರುದ್ಧ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಒಟ್ಟು 451 ರನ್‌ ಗಳಿಸಿದ್ದರು. ಇವರ ಬ್ಯಾಟಿಂಗ್‌ ನೆರವಿನಿಂದ ಆಸಿಸ್‌ 5-0 ಅಂತರದಲ್ಲಿ ಸರಣಿಯನ್ನು ವೈಟ್‌ ವಾಶ್‌ ಮಾಡಿಕೊಂಡಿತ್ತು. ಇದರ ಫಲವಾಗಿ ಫಿಂಚ್‌ ಏಕದಿನ ಶ್ರೇಯಾಂಕದ ಅಗ್ರ 10ಕ್ಕೆ ಲಗ್ಗೆ ಇಟ್ಟಿದ್ದಾರೆ.
ಪಾಕ್‌ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನದ ನೆರವಿನಿಂದ ಆ್ಯರೋನ್‌ ಫಿಂಚ್‌ ಅವರು 12 ಸ್ಥಾನಗಳಲ್ಲಿ ಏರಿಕೆ ಕಂಡು ವೆಸ್ಟ್‌ ಇಂಡೀಸ್‌ ತಂಡದ ಶಾಯ್‌ ಹೋಪ್‌ ಜೊತೆ 9ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಹೋಪ್‌ ಹಾಗೂ ಫಿಂಚ್‌ 744 ಅಂಕಗಳನ್ನು ಹೊಂದಿದ್ದಾರೆ.
ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್‌ ಉಸ್ಮಾನ್‌ ಖವಾಜ 6 ಸ್ಥಾನಗಳಲ್ಲಿ ಏರಿಕೆ ಕಂಡು 19ನೇ ಶ್ರೇಯಾಂಕ ಪಡೆದರೆ, ಗ್ಲೇನ್‌ ಮ್ಯಾಕ್ಸ್‌ ವೆಲ್‌ 10ರಲ್ಲಿ ಏರಿಕೆ ಕಂಡು 23ನೇ ಸ್ಥಾನದಲ್ಲಿದ್ದಾರೆ. ಆಸಿಸ್‌ ಸ್ಪಿನ್ನರ್ ಆ್ಯಡಂ ಝಂಪಾ 4 ಸ್ಥಾನ ಏರಿಕೆ ಕಂಡು 45ನೇ ಸ್ಥಾನ ಪಡೆದರು.
ಆಫ್ಘಾನಿಸ್ತಾನದ ರಶೀದ್‌ ಖಾನ್ 356 ಅಂಕಗಳೊಂದಿಗೆ ಆಲ್‌ರೌಂಡರ್ ವಿಭಾಗದಲ್ಲಿ ಅಗ್ರ ಸ್ಥಾನದಲ್ಲಿ ಉಳಿದಿದ್ದಾರೆ. ಬಾಂಗ್ಲಾದ ಶಕೀಬ್‌ ಹಲ್‌ ಹಸನ್ (341) ಎರಡನೇ ಶ್ರೇಯಾಂಕದಲ್ಲಿದ್ದಾರೆ. ತಂಡದ ವಿಭಾಗದಲ್ಲಿ ಇಂಗ್ಲೆಂಡ್ (123) ಅಗ್ರ ಸ್ಥಾನ ಹಾಗೂ 120 ಅಂಕ ಪಡೆದಿರುವ ಭಾರತ ಎರಡನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT