ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ವಿರಾಟ್ ಕೊಹ್ಲಿ, ಬೂಮ್ರಾ 
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ವಿರಾಟ್ ಕೊಹ್ಲಿ, ಬೂಮ್ರಾ

ಸೋಮವಾರ ಐಸಿಸಿ ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಹಾಗೂ ವೇಗಿ ಜಸ್ಪ್ರೀತ್‌ ಬೂಮ್ರಾ ಅವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ....

ದುಬೈ: ಸೋಮವಾರ ಐಸಿಸಿ ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಹಾಗೂ ವೇಗಿ ಜಸ್ಪ್ರೀತ್‌ ಬೂಮ್ರಾ ಅವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಕ್ರಮವಾಗಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ,  890 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿ ಉಳಿದುಕೊಂಡರೆ, ಉಪ ನಾಯಕ ರೋಹಿತ್‌ ಶರ್ಮಾ 839 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಜಸ್ಪ್ರೀತ್‌ ಬೂಮ್ರಾ 774 ಅಂಕಗಳೊಂದಿಗೆ ಅಗ್ರ ಸ್ಥಾನ ಪಡೆದರೆ, ಕುಲ್ದೀಪ್‌ ಯಾದವ್‌ ಹಾಗೂ ಯಜುವೇಂದ್ರ ಚಾಹಲ್‌ ಅಗ್ರ 10ರಲ್ಲಿ ಕಾಣಿಸಿಕೊಂಡಿದ್ದಾರೆ.
ಚೈನಾಮನ್‌ ಶೈಲಿಯ ಕುಲ್ದೀಪ್‌ 689 ಅಂಕಗಳೊಂದಿಗೆ 7ನೇ ಸ್ಥಾನ ಹಾಗೂ 680 ಅಂಕಗಳೊಂದಿಗೆ ಚಾಹಲ್‌ 8ನೇ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ನಾಯಕ ಆ್ಯರೋನ್‌ ಫಿಂಚ್, ಇತ್ತೀಚೆಗೆ ಮುಕ್ತಾಯವಾದ ಪಾಕಿಸ್ತಾನದ ವಿರುದ್ಧ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಒಟ್ಟು 451 ರನ್‌ ಗಳಿಸಿದ್ದರು. ಇವರ ಬ್ಯಾಟಿಂಗ್‌ ನೆರವಿನಿಂದ ಆಸಿಸ್‌ 5-0 ಅಂತರದಲ್ಲಿ ಸರಣಿಯನ್ನು ವೈಟ್‌ ವಾಶ್‌ ಮಾಡಿಕೊಂಡಿತ್ತು. ಇದರ ಫಲವಾಗಿ ಫಿಂಚ್‌ ಏಕದಿನ ಶ್ರೇಯಾಂಕದ ಅಗ್ರ 10ಕ್ಕೆ ಲಗ್ಗೆ ಇಟ್ಟಿದ್ದಾರೆ.
ಪಾಕ್‌ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನದ ನೆರವಿನಿಂದ ಆ್ಯರೋನ್‌ ಫಿಂಚ್‌ ಅವರು 12 ಸ್ಥಾನಗಳಲ್ಲಿ ಏರಿಕೆ ಕಂಡು ವೆಸ್ಟ್‌ ಇಂಡೀಸ್‌ ತಂಡದ ಶಾಯ್‌ ಹೋಪ್‌ ಜೊತೆ 9ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಹೋಪ್‌ ಹಾಗೂ ಫಿಂಚ್‌ 744 ಅಂಕಗಳನ್ನು ಹೊಂದಿದ್ದಾರೆ.
ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್‌ ಉಸ್ಮಾನ್‌ ಖವಾಜ 6 ಸ್ಥಾನಗಳಲ್ಲಿ ಏರಿಕೆ ಕಂಡು 19ನೇ ಶ್ರೇಯಾಂಕ ಪಡೆದರೆ, ಗ್ಲೇನ್‌ ಮ್ಯಾಕ್ಸ್‌ ವೆಲ್‌ 10ರಲ್ಲಿ ಏರಿಕೆ ಕಂಡು 23ನೇ ಸ್ಥಾನದಲ್ಲಿದ್ದಾರೆ. ಆಸಿಸ್‌ ಸ್ಪಿನ್ನರ್ ಆ್ಯಡಂ ಝಂಪಾ 4 ಸ್ಥಾನ ಏರಿಕೆ ಕಂಡು 45ನೇ ಸ್ಥಾನ ಪಡೆದರು.
ಆಫ್ಘಾನಿಸ್ತಾನದ ರಶೀದ್‌ ಖಾನ್ 356 ಅಂಕಗಳೊಂದಿಗೆ ಆಲ್‌ರೌಂಡರ್ ವಿಭಾಗದಲ್ಲಿ ಅಗ್ರ ಸ್ಥಾನದಲ್ಲಿ ಉಳಿದಿದ್ದಾರೆ. ಬಾಂಗ್ಲಾದ ಶಕೀಬ್‌ ಹಲ್‌ ಹಸನ್ (341) ಎರಡನೇ ಶ್ರೇಯಾಂಕದಲ್ಲಿದ್ದಾರೆ. ತಂಡದ ವಿಭಾಗದಲ್ಲಿ ಇಂಗ್ಲೆಂಡ್ (123) ಅಗ್ರ ಸ್ಥಾನ ಹಾಗೂ 120 ಅಂಕ ಪಡೆದಿರುವ ಭಾರತ ಎರಡನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT