ಮಲಿಂಗಾ ಬೌಲಿಂಗ್ 
ಕ್ರಿಕೆಟ್

12 ಗಂಟೆಗಳಲ್ಲಿ 2 ದೇಶಗಳಲ್ಲಿ 2 ಪಂದ್ಯಗಳಲ್ಲಿ 10 ವಿಕೆಟ್ ಕಬಳಿಸಿದ ಮಲಿಂಗಾ!

ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗಾ ಕ್ರಿಕೆಟ್ ಲೋಕದಲ್ಲಿ ಅತ್ಯಪರೂಪದ ದಾಖಲೆ ನಿರ್ಮಾಣ ಮಾಡಿದ್ದು, ಕೇವಲ 12 ಗಂಟೆಗಳ ಅವಧಿಯಲ್ಲಿ 2 ದೇಶಗಳಲ್ಲಿ 2 ಕ್ರಿಕೆಟ್​ ಪಂದ್ಯಗಳನ್ನಾಡಿ 10 ವಿಕೆಟ್​ ಪಡೆಯುವ ಮೂಲಕ ಎರಡೂ ತಂಡಗಳಿಗೆ ಗೆಲುವು ದಕ್ಕಿಸಿಕೊಟ್ಟಿದ್ದಾರೆ.

ಮುಂಬೈ: ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗಾ ಕ್ರಿಕೆಟ್ ಲೋಕದಲ್ಲಿ ಅತ್ಯಪರೂಪದ ದಾಖಲೆ ನಿರ್ಮಾಣ ಮಾಡಿದ್ದು, ಕೇವಲ 12 ಗಂಟೆಗಳ ಅವಧಿಯಲ್ಲಿ 2 ದೇಶಗಳಲ್ಲಿ 2 ಕ್ರಿಕೆಟ್​ ಪಂದ್ಯಗಳನ್ನಾಡಿ 10 ವಿಕೆಟ್​ ಪಡೆಯುವ ಮೂಲಕ ಎರಡೂ ತಂಡಗಳಿಗೆ ಗೆಲುವು ದಕ್ಕಿಸಿಕೊಟ್ಟಿದ್ದಾರೆ.
ಹೌದು.. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಪರ ಆಡಿದ್ದ ಮಲಿಂಗಾ 34 ರನ್​ ನೀಡಿ 3 ವಿಕೆಟ್​ ಪಡೆದಿದ್ದರು. ಈ ಪಂದ್ಯವನ್ನು ಮುಂಬೈ ಇಂಡಿಯನ್ಸ್​ ತಂಡ ಗೆದ್ದುಕೊಂಡಿತ್ತು. ಮಧ್ಯರಾತ್ರಿ ವೇಳೆಗೆ ಐಪಿಎಲ್​ ಪಂದ್ಯ ಮುಗಿದಿತ್ತು. 
ಆದರೂ ಮಲಿಂಗಾ ಗುರುವಾರ ಮುಂಜಾನೆ ಮುಂಬೈನಿಂದ ಹೊರಟು ಕ್ಯಾಂಡಿ ತಲುಪಿದ್ದರು. ಅಲ್ಲಿ ಅವರು ಶ್ರೀಲಂಕಾ ದೇಶೀಯ ಕ್ರಿಕೆಟ್ ನ ಲಿಸ್ಟ್​ ಎ ಪಂದ್ಯದಲ್ಲಿ ಆಡಿದರು. ಈ ಪಂದ್ಯದಲ್ಲಿ ಗಾಲೆ ತಂಡವನ್ನು ಪ್ರತಿನಿಧಿಸಿದ್ದ ಮಲಿಂಗಾ 49 ರನ್​ಗೆ 7 ವಿಕೆಟ್​ ಪಡೆದು ಜೀವನ ಶ್ರೇಷ್ಠ ಬೌಲಿಂಗ್​ ನಿರ್ವಹಣೆಯೊಂದಿಗೆ ಕ್ಯಾಂಡಿ ತಂಡದ ವಿರುದ್ಧ 156 ರನ್​ಗಳ ಗೆಲುವು ದಕ್ಕಿಸಿಕೊಟ್ಟರು.
ಶ್ರೀಲಂಕಾ ಏಕದಿನ ತಂಡದ ನಾಯಕ ಮಲಿಂಗಾ ಅವರಿಗೆ ಏಪ್ರಿಲ್​ ತಿಂಗಳಿನಲ್ಲಿ ಐಪಿಎಲ್ ನಲ್ಲಿ ಪಾಲ್ಗೊಳ್ಳಲು ಶ್ರೀಲಂಕಾ ಕ್ರಿಕೆಟ್​ ಮಂಡಳಿ ಅನುಮತಿ ನೀಡಿತ್ತು. ಆದರೆ ವಿಶ್ವಕಪ್ ಗೆ ಸಿದ್ಧವಾಗುವ ನಿಟ್ಟಿನಲ್ಲಿ ಮಲಿಂಗಾ ದೇಶೀಯ ಟೂರ್ನಿಗಳಲ್ಲೂ ಆಡಲು ನಿರ್ಧರಿಸಿದ್ದಾರೆ. ಐಪಿಎಲ್​ ಪಂದ್ಯಗಳ ನಡುವೆ ಬಿಡುವು ಮಾಡಿಕೊಂಡು ಶ್ರೀಲಂಕಾದಲ್ಲೂ ಪ್ರಾಂತೀಯ ತಂಡಗಳ ಪರ ಆಡುತ್ತಿದ್ದಾರೆ.
ಈ ಬಗ್ಗೆ ಮುಂಬೈ ಇಂಡಿಯನ್ಸ್ ತಂಡ ಕೂಡ ತನ್ನ ಟ್ವಿಟರ್ ಖಾತೆಯಲ್ಲಿ ಹೆಮ್ಮೆಯಿಂದ ಬರೆದುಕೊಂಡಿದ್ದು, ಚಾಂಪಿಯನ್ ಮಲಿಂಗಾ ತಂಡ ಸೇರಿಕೊಳ್ಳುವುದನ್ನು ಎದುರುನೋಡುತ್ತಿದ್ದೇವೆ ಎಂದು ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT