ಬೆಂಗಳೂರು: ಸತತ ಐದು ಪಂದ್ಯಗಳ ಸೋಲಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಅಭಿಮಾನಿಗಳು ತೀವ್ರ ನಿರಾಶೆಗೊಳಲಾಗಿದ್ದು ಈ ಮಧ್ಯೆ ಆರ್ಸಿಬಿ ತಂಡವನ್ನು ಬೈದರೆ ನಿಮ್ಮನ್ನು ಕೊಲೆ ಮಾಡುತ್ತೀನಿ ಎಂದು ಅಭಿಮಾನಿಯೊಬ್ಬ ವಿವರಣೆಗಾರರೊಬ್ಬರಿಗೆ ಬೆದರಿಕೆ ಹಾಕಿದ್ದಾರೆ.
ತಂಡದ ಪ್ರದರ್ಶನದಿಂದ ಅಭಿಮಾನಿಗಳು ತೀವ್ರ ಬೇಸರಗೊಂಡಿದ್ದಾರೆ. ಇದರಿಂದ ತಂಡದ ವಿರುದ್ಧ ಅಸಮಾಧಾನ ಹೊರಹಾಕಿ ನಾಯಕತ್ವದ ಬದಲಾವಣೆ ಮಾತನಾಡಿದ್ದಾರೆ. ಆದರೆ ಇಲ್ಲೊಬ್ಬ ಅಭಿಮಾನಿ ಮಾತ್ರ ತಂಡದ ಬಗ್ಗೆ ಕಮೆಂಟ್ ಮಾಡಿದರೆ ಕೊಲೆ ಮಾಡುವುದಾಗಿ ಸೈಮಲ್ ಡೌಲ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಅಭಿಮಾನಿಯ ಈ ಹೇಳಿಕೆಗೆ ಸೈಮನ್ ಪ್ರತಿಕ್ರಿಯೆ ನೀಡಿದ್ದು ಅಭಿಮಾನಿಯ ಈ ಸಂದೇಶದ ಸ್ಕ್ರೀನ್ ಶಾಟ್ ತೆಗೆದು ಟ್ವೀಟರಿನಲ್ಲಿ ಟ್ವೀಟ್ ಮಾಡಿದ್ದಾರೆ. ಕೊಲೆ ಬೆದರಿಕೆ ಬರುವಂತೆ ನಾನು ಏನು ಹೇಳಿದ್ದೇನೆ ಎಂಬುದರ ಬಗ್ಗೆ ಅರಿವಿಲ್ಲ. ಆದರೆ ಇದು ಕೇವಲ ಕ್ರೀಡೆಯಷ್ಟೇ ಎಂದು ತಿಳಿಸಿ ಸಮಾಧಾನಗೊಳ್ಳುವಂತೆ ಬರೆದುಕೊಂಡಿದ್ದಾರೆ. ಆದರೆ ಈ ಟ್ವೀಟ್ ವೈರಲ್ ಆಗುತ್ತಿದಂತೆ ಡಿಲೀಟ್ ಮಾಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos