ಬೆಂಗಳೂರು: ಈ ಸಲ ಕಪ್ ನಮ್ದೆ ಎಂದು ಹೇಳಿಕೊಂಡು ತಿರುಗುತ್ತಿದ್ದ ಆರ್ಸಿಬಿ ಅಭಿಮಾನಿಗಳಿಗೆ ತಂಡ ಸತತ ಐದು ಪಂದ್ಯಗಳಲ್ಲಿ ಸೋಲು ಕಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಬೌಲರ್ಗಳಿಗೆ ಧೈರ್ಯ ಸಾಲದು ಎಂದು ಕಿಡಿಕಾರಿದ್ದಾರೆ.
ನಿನ್ನೆ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲೂ ಆರ್ಸಿಬಿ 5 ವಿಕೆಟ್ ಗಳಿಂದ ಸೋಲು ಕಂಡಿತ್ತು. ಇದರಿಂದ ಬೌಲರ್ ಗಳ ವಿರುದ್ಧ ವಿರಾಟ್ ಕೊಹ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
206 ರನ್ ಟಾರ್ಗೆಟ್ ನೀಡಿದ್ದರೂ ಈ ಪಂದ್ಯದಲ್ಲಿ ಸೋಲ್ತೀವಿ ಅಂದುಕೊಂಡಿರಲಿಲ್ಲ. ಆದರೆ ಕೊನೆಯ ನಾಲ್ಕು ಓವರ್ ಗಳಲ್ಲಿನ ಬೌಲಿಂಗ್ ಅಂತೂ ಒಪ್ಪಲಾಗದು. ಐಪಿಎಲ್ ನಲ್ಲಿ ನಾವು ನಿಜವಾಗಿ ತೋರಿಸಬೇಕಿರುವ ಆಟ ಆಡಲಾಗುತ್ತಿಲ್ಲ. ಸಾಕಷ್ಟು ಧೈರ್ಯವಿಲ್ಲದೇ ಈ ರೀತಿ ಬೌಲಿಂಗ್ ಮಾಡಿದರೆ ಅಂಗಳದಲ್ಲಿ ರಸಲ್ ನಂತಹ ಹೊಡಿಬಡಿ ಆಟಗಾರನಿದ್ದಾಗ ನಮಗೆ ತೀರ ಕಠಿಣ ಎನಿಸುತ್ತದೆ ಎಂದು ಹೇಳಿಕೊಂಡಿದ್ದಾರೆ.
ಕಳಪೆ ಬೌಲಿಂಗ್ ಪ್ರದರ್ಶನ ನೀಡಿದರೆ ನಾವು ಒತ್ತಡ ಸನ್ನಿವೇಶಗಳನ್ನು ಸಮರ್ಥವಾಗಿ ನಿಭಾಯಿಸಲು ಆಗುವುದಿಲ್ಲ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos