ಎಂಎಸ್ ಧೋನಿ-ಸಾಕ್ಷಿ 
ಕ್ರಿಕೆಟ್

ಪತ್ನಿ ಜೊತೆ ಏರ್‌ಪೋರ್ಟ್‌ನ ನೆಲದ ಮೇಲೆ ಮಲಗಿದ ಧೋನಿ, ನೆಟಿಗರ ಪ್ರಶಂಸೆ!

ಯಶಸ್ಸಿನ ಉತ್ತುಂಗದಲ್ಲಿರುವಾಗ ಯಾರು ಸಹ ಸಾಮಾನ್ಯನಂತೆ ಇರಲು ಇಷ್ಟಪಡುವುದಿಲ್ಲ. ಆದರೆ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮಾತ್ರ...

ಚೆನ್ನೈ: ಯಶಸ್ಸಿನ ಉತ್ತುಂಗದಲ್ಲಿರುವಾಗ ಯಾರು ಸಹ ಸಾಮಾನ್ಯನಂತೆ ಇರಲು ಇಷ್ಟಪಡುವುದಿಲ್ಲ. ಆದರೆ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮಾತ್ರ ತಾವು ಎಲ್ಲರಿಗಿಂತ ಭಿನ್ನ ಎಂಬುದನ್ನು ತೋರಿಸಿದ್ದು ಧೋನಿಗೆ ನೆಟಿಗರು ಜೋಹಾರ್ ಹೇಳಿದ್ದಾರೆ. 
ಐಪಿಎಲ್ ಟೂರ್ನಿಯ ಪಂದ್ಯದ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚೆನ್ನೈ ನಿಂದ ಜೈಪುರಕ್ಕೆ ಪ್ರಯಾಣ ಬೆಳೆಸಿತ್ತು. ಈ ವೇಳೆ ಬೇಗನೆ ವಿಮಾನ ನಿಲ್ದಾಣಕ್ಕೆ ಬಂದಿದ್ದ ಎಂಎಸ್ ಧೋನಿ ಹಾಗೂ ಪತ್ನಿ ಸಾಕ್ಷಿ ಇಬ್ಬರು ನೆಲದ ಮೇಲೆ ಮಲಗಿ ವಿಶ್ರಾಂತಿ ಪಡೆದರು. 
ಐಪಿಎಲ್ ಪಂದ್ಯಗಳು ತಡರಾತ್ರಿವರೆಗೂ ನಡೆಯುವುದರಿಂದ ಆಟಗಾರರು ತಡವಾಗಿ ಮಲಗುತ್ತಾರೆ. ಆದರೆ ಮುಂದಿನ ಪಂದ್ಯಕ್ಕೆ ಬೇರೆಡೆ ತೆರಳಬೇಕಾದ ಕಾರಣ ಮತ್ತೆ ಬೆಳಗ್ಗೆ ಬಹುಬೇಗ ಎದ್ದು ತೆರಳುತ್ತಾರೆ. ಬಿಡುವಿಲ್ಲದ ವೇಳಾಪಟ್ಟಿಯೊಂದಿಗೆ ಆಟಗಾರರು ಫಿಟ್ನೆಸ್ ಕಾಯ್ದಕೊಳ್ಳುವುದು ಸವಾಲಿನ ಕೆಲಸವಾಗಿದೆ.
ಚೆನ್ನೈನ ತಂಡ ಮುಂದಿನ ಪಂದ್ಯ ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆಯಲಿದೆ. ಈ ಹಿಂದೆಯೂ ಕೂಡ ಧೋನಿ ತಮಗೆ ಸಿಕ್ಕ ವಿರಾಮ ಸಮಯವನ್ನು ವ್ಯರ್ಥ ಮಾಡದೇ ವಿಶ್ರಾಂತಿ ಪಡೆದುಕೊಳ್ಳುವ ಮೂಲಕ ಮುಂದಿನ ಪಂದ್ಯದ ತಯಾರಿಗೆಬೇಕಾದ ಸಮಯವನ್ನು ನಿರ್ವಹಿಸುತ್ತಿದ್ದರು. ಹಲವು ಸಂದರ್ಭದಲ್ಲಿ ಪಂದ್ಯದ ನಡುವೆ ಮೈದಾನದಲ್ಲೇ ಮಲಗಿಕೊಂಡು ವಿಶ್ರಾಂತಿ ಪಡೆಯುವ ಮೂಲಕ ಗಮನ ಸೆಳೆದಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT