ಮುಂಬೈ: ನಾವು ಆಯ್ಕೆ ಮಾಡಿರುವ ತಂಡ ವಿಶ್ವಕಪ್ ಮಹಾಸಮರಕ್ಕೆ ಎಲ್ಲಾ ಕಡೆಯಿಂದಲೂ ಸಮರ್ಥ ಹಾಗೂ ಸದೃಢವಾಗಿದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ಕೆ ಪ್ರಸಾದ್ ಹೇಳಿದ್ದಾರೆ.
ವಿಶ್ವಕಪ್ ಗೆ ಆಯ್ಕೆಯಾಗಿರುವ ತಂಡದಲ್ಲಿ ಅಂಬಟ್ಟಿ ರಾಯುಡು ಮತ್ತು ರಿಷಬ್ ಪಂತ್ ಗೆ ಅವಕಾಶ ನೀಡಿಲ್ಲ. ಬದಲಿಗೆ ವಿಜಯ್ ಶಂಕರ್ ಗೆ ಸ್ಥಾನ ನೀಡಲಾಗಿದ್ದು ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಂಎಸ್ಕೆ ಪ್ರಸಾದ್, ಚಾಂಪಿಯನ್ಸ್ ಟ್ರೋಫಿ ಬಳಿಕ ನಾವು ಅಂಬಟ್ಟಿ ರಾಯುಡು ಹಾಗೂ ವಿಜಯ್ ಶಂಕರ್ ಅವುಗಳನ್ನು ನೀಡಿದ್ದೇವು. ಈ ಅವಕಾಶಗಳನ್ನು ಸಮರ್ಥವಾಗಿ ಉಪಯೋಗಿಸಿಕೊಳ್ಳುವಲ್ಲಿ ರಾಯುಡು ವಿಫಲರಾಗಿದ್ದಾರೆ. ಆದರೆ ಶಂಕರ್ ಒಳ್ಳೆಯ ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಆಲ್ರೌಂಡರ್ ಆಗಿದ್ದು ಇದು ನಮಗೆ ಟೂರ್ನಿಗೆ ಉಪಯುಕ್ತವಾಗುತ್ತದೆ ಎಂದರು.
ಹಾರ್ದಿಕ್ ಪಾಂಡ್ಯ ಜೊತೆಗೆ ನಮಗೆ ಮತ್ತೊಬ್ಬ ಆಲ್ರೌಂಡರ್ ಅವಶ್ಯಕತೆ ಇತ್ತು. ಹೀಗಾಗಿ ಮೂರು ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ವಿಜಯ್ ಶಂಕರ್ ಗೆ ನಮ್ಮ ಮೊದಲ ಆದ್ಯತೆ ಎಂದರು.
ವಿಶ್ವಕಪ್ ಗೆ ಆಯ್ಕೆಯಾಗಿರುವ ಟೀಂ ಇಂಡಿಯಾ ಆಟಗಾರರ ಪಟ್ಟಿ:
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos