ಸಂಗ್ರಹ ಚಿತ್ರ 
ಕ್ರಿಕೆಟ್

ಕ್ರಿಕೆಟ್ ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ: ರಾಹುಲ್‌, ಕಾರ್ತಿಕ್‌ ಇನ್‌; ಪಂತ್‌, ರಾಯುಡು ಔಟ್‌

ಮುಂಬರುವ ಐಸಿಸಿ ವಿಶ್ವಕಪ್‌ಗೆ 15 ಆಟಗಾರರ ಭಾರತ ತಂಡವನ್ನು ಬಿಸಿಸಿಐ ಇಂದು ಬಿಡುಗಡೆ ಮಾಡಿದೆ.

ಮುಂಬರುವ ಐಸಿಸಿ ವಿಶ್ವಕಪ್‌ಗೆ 15 ಆಟಗಾರರ ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಇಂದು ಬಿಡುಗಡೆ ಮಾಡಿದೆ. ಎಂದಿನಂತೆ ವಿರಾಟ್‌ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದು, ರೋಹಿತ್‌ ಶರ್ಮಾ ಉಪ ನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ, ನಿರೀಕ್ಷೆಯಂತೆ ಕರ್ನಾಟಕದ ಕೆ ಎಲ್‌ ರಾಹುಲ್‌ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್‌. ಕೆ ಪ್ರಸಾದ್‌ ನೇತೃತ್ವದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ, ಮುಖ್ಯ ತರಬೇತುದಾರ ರವಿಶಾಸ್ತ್ರಿ ಅವರನ್ನೊಳಗೊಂಡ ಸಭೆಯಲ್ಲಿ 15 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.

ರಿಷಭ್‌ ಪಂತ್‌ ಹಾಗೂ ಅಂಬಾಟಿ ರಾಯುಡು ಅವರ ಬದಲಿಗೆ ಕೆ.ಎಲ್‌. ರಾಹುಲ್‌ ಹಾಗೂ ದಿನೇಶ್‌ ಕಾರ್ತಿಕ್‌ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಜತೆಗೆ ಆಲ್‌ರೌಂಡರ್‌ ವಿಜಯ್‌ ಶಂಕರ್‌ ಹಾಗೂ ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ.

ಅಂಬಾಟಿ ರಾಯುಡು ಹಾಗೂ ರಿಷಭ್‌ ಪಂತ್‌ ಅವರು ವಿಶ್ವಕಪ್‌ ಭಾರತ ತಂಡದ ಪ್ರಮುಖ ಸಂಭವನೀಯ ಆಟಗಾರರಾಗಿದ್ದರು. ಆದರೆ, ಯುವ ವಿಕೆಟ್‌ ಕೀಪರ್‌ ಪಂತ್‌ ಬದಲು ಅನುಭವಿ ದಿನೇಶ್‌ ಕಾರ್ತಿಕ್ ಅವರಿಗೆ ಅವಕಾಶ ನೀಡಲಾಗಿದೆ. ಮೀಸಲು ಆರಂಭಿಕ ಹಾಗೂ ನಾಲ್ಕನೇ ಕ್ರಮಾಂಕಕ್ಕೆ ಅಂಬಾಟಿ ರಾಯುಡು ಬದಲು ಕನ್ನಡಿಗ ರಾಹುಲ್‌ ಅವರನ್ನು ಪರಿಗಣಿಸಲಾಗಿದೆ.

ಟೀಂ ಇಂಡಿಯಾ ತಂಡ
ವಿರಾಟ್ ಕೊಹ್ಲಿ (ನಾಯಕ)
ರೋಹಿತ್ ಶರ್ಮಾ (ಉಪನಾಯಕ)
ಶಿಖರ್ ಧವನ್
ಕೆಎಲ್ ರಾಹುಲ್
ವಿಜಯ್ ಶಂಕರ್ 
ಕೇದಾರ್ ಜಾದವ್
ದಿನೇಶ್ ಕಾರ್ತಿಕ್
ಎಂಎಸ್ ಧೋನಿ
ಕುಲದೀಪ್ ಯಾದವ್
ಭುವನೇಶ್ವರ್ ಕುಮಾರ್
ಯಜುವೇಂದ್ರ ಚಹಾಲ್
ಜಸ್ ಪ್ರೀತ್ ಬುಮ್ರಾ
ಹಾರ್ದಿಕ್ ಪಾಂಡ್ಯ
ರವೀಂದ್ರ ಜಡೇಜಾ 
ಮೊಹಮ್ಮದ್ ಶಮಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT