ಸಂಗ್ರಹ ಚಿತ್ರ 
ಕ್ರಿಕೆಟ್

ಕ್ರಿಕೆಟ್ ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ: ರಾಹುಲ್‌, ಕಾರ್ತಿಕ್‌ ಇನ್‌; ಪಂತ್‌, ರಾಯುಡು ಔಟ್‌

ಮುಂಬರುವ ಐಸಿಸಿ ವಿಶ್ವಕಪ್‌ಗೆ 15 ಆಟಗಾರರ ಭಾರತ ತಂಡವನ್ನು ಬಿಸಿಸಿಐ ಇಂದು ಬಿಡುಗಡೆ ಮಾಡಿದೆ.

ಮುಂಬರುವ ಐಸಿಸಿ ವಿಶ್ವಕಪ್‌ಗೆ 15 ಆಟಗಾರರ ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಇಂದು ಬಿಡುಗಡೆ ಮಾಡಿದೆ. ಎಂದಿನಂತೆ ವಿರಾಟ್‌ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದು, ರೋಹಿತ್‌ ಶರ್ಮಾ ಉಪ ನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ, ನಿರೀಕ್ಷೆಯಂತೆ ಕರ್ನಾಟಕದ ಕೆ ಎಲ್‌ ರಾಹುಲ್‌ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್‌. ಕೆ ಪ್ರಸಾದ್‌ ನೇತೃತ್ವದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ, ಮುಖ್ಯ ತರಬೇತುದಾರ ರವಿಶಾಸ್ತ್ರಿ ಅವರನ್ನೊಳಗೊಂಡ ಸಭೆಯಲ್ಲಿ 15 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.

ರಿಷಭ್‌ ಪಂತ್‌ ಹಾಗೂ ಅಂಬಾಟಿ ರಾಯುಡು ಅವರ ಬದಲಿಗೆ ಕೆ.ಎಲ್‌. ರಾಹುಲ್‌ ಹಾಗೂ ದಿನೇಶ್‌ ಕಾರ್ತಿಕ್‌ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಜತೆಗೆ ಆಲ್‌ರೌಂಡರ್‌ ವಿಜಯ್‌ ಶಂಕರ್‌ ಹಾಗೂ ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ.

ಅಂಬಾಟಿ ರಾಯುಡು ಹಾಗೂ ರಿಷಭ್‌ ಪಂತ್‌ ಅವರು ವಿಶ್ವಕಪ್‌ ಭಾರತ ತಂಡದ ಪ್ರಮುಖ ಸಂಭವನೀಯ ಆಟಗಾರರಾಗಿದ್ದರು. ಆದರೆ, ಯುವ ವಿಕೆಟ್‌ ಕೀಪರ್‌ ಪಂತ್‌ ಬದಲು ಅನುಭವಿ ದಿನೇಶ್‌ ಕಾರ್ತಿಕ್ ಅವರಿಗೆ ಅವಕಾಶ ನೀಡಲಾಗಿದೆ. ಮೀಸಲು ಆರಂಭಿಕ ಹಾಗೂ ನಾಲ್ಕನೇ ಕ್ರಮಾಂಕಕ್ಕೆ ಅಂಬಾಟಿ ರಾಯುಡು ಬದಲು ಕನ್ನಡಿಗ ರಾಹುಲ್‌ ಅವರನ್ನು ಪರಿಗಣಿಸಲಾಗಿದೆ.

ಟೀಂ ಇಂಡಿಯಾ ತಂಡ
ವಿರಾಟ್ ಕೊಹ್ಲಿ (ನಾಯಕ)
ರೋಹಿತ್ ಶರ್ಮಾ (ಉಪನಾಯಕ)
ಶಿಖರ್ ಧವನ್
ಕೆಎಲ್ ರಾಹುಲ್
ವಿಜಯ್ ಶಂಕರ್ 
ಕೇದಾರ್ ಜಾದವ್
ದಿನೇಶ್ ಕಾರ್ತಿಕ್
ಎಂಎಸ್ ಧೋನಿ
ಕುಲದೀಪ್ ಯಾದವ್
ಭುವನೇಶ್ವರ್ ಕುಮಾರ್
ಯಜುವೇಂದ್ರ ಚಹಾಲ್
ಜಸ್ ಪ್ರೀತ್ ಬುಮ್ರಾ
ಹಾರ್ದಿಕ್ ಪಾಂಡ್ಯ
ರವೀಂದ್ರ ಜಡೇಜಾ 
ಮೊಹಮ್ಮದ್ ಶಮಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT