ಆಶಿಶ್ ನೆಹ್ರಾ-ವಿರಾಟ್ ಕೊಹ್ಲಿ 
ಕ್ರಿಕೆಟ್

ಮುಂಬೈ ವಿರುದ್ಧ ಆರ್‌ಸಿಬಿ ಮುಗ್ಗರಿಸಲು ನೆಹ್ರಾ ಕಾರಣನಾ? ಕೊಹ್ಲಿ ವಿರುದ್ದ ವ್ಯಾಪಕ ಟೀಕೆ, ಏನಿದು ವಿಡಿಯೋ!

ಸತತ ಆರು ಪಂದ್ಯಗಳ ಸೋಲಿನ ಬಳಿಕ ಏಳನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಆರ್‌ಸಿಬಿ ತಂಡ ಕೊಂಚ ಭರವಸೆ ಮೂಡಿಸಿತ್ತು. ಆದರೆ 8 ಪಂದ್ಯದಲ್ಲೂ ಮುಂಬೈ ವಿರುದ್ಧ ಕೊಹ್ಲಿ ಪಡೆ ಮತ್ತೆ ಮುಗ್ಗರಿಸಿದೆ.

ಮುಂಬೈ: ಸತತ ಆರು ಪಂದ್ಯಗಳ ಸೋಲಿನ ಬಳಿಕ ಏಳನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಆರ್‌ಸಿಬಿ ತಂಡ ಕೊಂಚ ಭರವಸೆ ಮೂಡಿಸಿತ್ತು. ಆದರೆ 8 ಪಂದ್ಯದಲ್ಲೂ ಮುಂಬೈ ವಿರುದ್ಧ ಕೊಹ್ಲಿ ಪಡೆ ಮತ್ತೆ ಮುಗ್ಗರಿಸಿದ್ದು ತಂಡದ ಸೋಲಿಗೆ ಬೌಲಿಂಗ್ ಕೋಚ್ ಆಶಿಶ್ ನೆಹ್ರಾ ಕಾರಣಾನಾ? ಈ ವಿಡಿಯೋವನ್ನು ಟ್ವೀಟ್ ಮಾಡುತ್ತಾ ನೆಟಿಗರು ನಾಯಕ ಕೊಹ್ಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಬೈ ವಿರುದ್ಧದ ಪಂದ್ಯದ ವೇಳೆ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಬೌಲಿಂಗ್ ಕೋಚ್ ಆಶಿಶ್ ನೆಹ್ರಾ ನಿಯಂತ್ರಿಸುತ್ತಿರುವುದು ಕಂಡುಬಂದಿತ್ತು. ನಿರ್ಣಾಯಕ 19ನೇ ಓವರ್ ಪವನ್ ನೇಗಿಗೆ ನೀಡಲು ನೆಹ್ರಾ ಅವರೇ ಸಲಹೆ ಮಾಡುತ್ತಿದ್ದರು. 
ಆಶಿಶ್ ನೆಹ್ರಾ ಅವರ ಸಲಹೆಯನ್ನು ಚಾಚು ತಪ್ಪದೇ ಕೊಹ್ಲಿ ಅನುಸರಿಸುತ್ತಿದ್ದದ್ದೆ ಸೋಲಿಗೆ ಕಾರಣ ಎನ್ನಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ವ್ಯಾಪಕ ಟ್ರೋಲ್ ಗಳು ಹರಿದಾಡುತ್ತಿದೆ. 19ನೇ ಓವರ್ ಅನ್ನು ಕೊಹ್ಲಿ ಬಲಗೈ ವೇಗಿ ನವದೀಪ್ ಸೈನಿಗೆ ನೀಡಲು ಮುಂದಾಗಿದ್ದರು. ಈ ಹಂತದಲ್ಲಿ ಸ್ಪಿನ್ನರ್ ಗೆ ನೀಡಲು ನೆಹ್ರಾ ಸೂಚಿಸಿದ್ದರು. ಪರಿಣಾಮ ಪವನ್ ನೇಗಿ ದಾಳಿಯಲ್ಲಿ 22 ರನ್ ಚಚ್ಚಿಸಿಕೊಂಡರು. ಇದರೊಂದಿಗೆ ಇನ್ನು ಒಂದು ಓವರ್ ಬಾಕಿ ಇರುವಂತೆ ಪಂದ್ಯದಲ್ಲಿ ಮುಂಬೈ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT