ಪಾರ್ಥಿವ್ ಪಟೇಲ್ 
ಕ್ರಿಕೆಟ್

2 ರನ್ ಬೇಕಿದ್ದಾಗ ಕೊನೆಯ ಎಸೆತದಲ್ಲಿ ರನೌಟ್ ಮಾಡಿ ಹೀರೋ ಆದ ಪಾರ್ಥಿವ್, ವಿಡಿಯೋ!

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಶಾರ್ದೂಲ್ ಠಾಕೂರ್ ರನ್ನು ರನೌಟ್ ಮಾಡುವ ಮೂಲಕ ಪಂದ್ಯವನ್ನು ಗೆಲ್ಲಿಸಿದ ಪಾರ್ಥಿವ್ ಪಟೇಲ್ ಅಭಿಮಾನಿಗಳ ದೃಷ್ಠಿಯಲ್ಲಿ ಹೀರೋ ಆಗಿದ್ದಾರೆ.

ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಶಾರ್ದೂಲ್ ಠಾಕೂರ್ ರನ್ನು ರನೌಟ್ ಮಾಡುವ ಮೂಲಕ ಪಂದ್ಯವನ್ನು ಗೆಲ್ಲಿಸಿದ ಪಾರ್ಥಿವ್ ಪಟೇಲ್ ಅಭಿಮಾನಿಗಳ ದೃಷ್ಠಿಯಲ್ಲಿ ಹೀರೋ ಆಗಿದ್ದಾರೆ. 
ಕೊನೆಯ ಓವರ್ ನಲ್ಲಿ ಚೆನ್ನೈಗೆ ಗೆಲ್ಲಲು 26 ರನ್ ಬೇಕಿತ್ತು. ಈ ವೇಳೆ ಎಂಎಸ್ ಧೋನಿ 4,6,6,2,6 ರನ್ ಬಾರಿಸಿದ್ದರು. ಇನ್ನು ಕೊನೆಯ ಎಸೆತದಲ್ಲಿ ಗೆಲ್ಲಲು ಚೆನ್ನೈಗೆ 2 ರನ್ ಬೇಕಿತ್ತು. ಈ ವೇಳೆ ಉಮೇಶ್ ಯಾದವ್ ಬೌಲಿಂಗ್ ನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾದರು. ಚೆಂಡು ಕೀಪರ್ ಕೈ ಸೇರುತ್ತಿದ್ದಂತೆ 1 ರನ್ ಪಡೆದು ಪಂದ್ಯವನ್ನು ಡ್ರಾ ಮಾಡಲು ಧೋನಿ ಮುಂದಾದರು. ಆದರೆ ನಾನ್ ಸ್ಟ್ರೈಕ್ ನಲ್ಲಿದ್ದ ಶಾರ್ದೂಲ್ ಠಾಕೂರ್ ಕ್ರೀಸ್ ಗೆ ಬರುವ ಮುನ್ನವೇ ಪಾರ್ಥಿವ್ ರನೌಟ್ ಮಾಡಿದರು. ಇದರೊಂದಿಗೆ ಆರ್ಸಿಬಿ ತಂಡ 1 ರನ್ ನಿಂದ ರೋಚಕ ಗೆಲುವು ಪಡೆಯಿತು.
ಅಂತೂ ಪಾರ್ಥಿವ್ ಪಟೇಲ್ ಅವರ ಜಾಣ್ಮೆಯ ಆಟದಿಂದ ಆರ್ಸಿಬಿ ಪಂದ್ಯ ಗೆದ್ದು ಬೀಗಿತ್ತು. ಪಾರ್ಥಿವ್ ಪಟೇಲ್ ರನೌಟ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. 
ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ಸಿಬಿ ತಂಡ ನಿಗದಿತ ಓವರ್ ನಲ್ಲಿ 161 ರನ್ ಪೇರಿಸಿತ್ತು. 162 ರನ್ ಗುರಿ ಬೆನ್ನಟ್ಟಿದ್ದ ಚೆನ್ನೈ ತಂಡವನ್ನು 160 ರನ್ ಗಳಿಗೆ ಕಟ್ಟಿ ಹಾಕುವ ಮೂಲಕ 1 ರನ್ ನಿಂದ ಗೆಲುವು ಸಾಧಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT