ಸಂಗ್ರಹ ಚಿತ್ರ 
ಕ್ರಿಕೆಟ್

ಅಭಿಮಾನಿಗಳಿಗೆ ಶಾಕ್: ಸನ್ ರೈಸರ್ಸ್ ತಂಡದಿಂದ ವಾಪಸ್ ಹೊರಟ ಡೇವಿಡ್ ವಾರ್ನರ್‌, ಜಾನಿ ಬೇರ್‌ ಸ್ಟೋವ್..!

ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಸ್ಟಾರ್ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಜಾನಿ ಬೇರ್ ಸ್ಟೋವ್ ತಂಡದಿಂದ ಹೊರಬಿದ್ದಿದ್ದಾರೆ.

ನವದೆಹಲಿ: ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಸ್ಟಾರ್ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಜಾನಿ ಬೇರ್ ಸ್ಟೋವ್ ತಂಡದಿಂದ ಹೊರಬಿದ್ದಿದ್ದಾರೆ.
ಹೌದು.. ಹಾಲಿ ಐಪಿಎಲ್ 2019 ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಜಾನಿ ಬೇರ್ ಸ್ಟೋವ್ ತಂಡವನ್ನು ತೊರೆದಿದ್ದು, ರಾಷ್ಟ್ರೀಯ ತಂಡ ಸೇರಿಕೊಂಡಿದ್ದಾರೆ. 
ಮುಂಬರುವ ಐಸಿಸಿ ವಿಶ್ವಕಪ್‌ ಹಿನ್ನೆಲೆಯಲ್ಲಿ ಬಲಗೈ ಬ್ಯಾಟ್ಸ್ ಮನ್‌ ಜಾನಿ ಬೈರ್‌ ಸ್ಟೋ ಇಂಗ್ಲೆಂಡ್‌ ತಂಡ ಸೇರ್ಪಡೆಗೊಳ್ಳುತ್ತಿದ್ದಾರೆ. ಇಂದು ಸನ್‌ ರೈಸರ್ಸ್‌ ಹೈದರಾಬಾದ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಪಂದ್ಯದ ಬಳಿಕ ಅವರು ಸ್ವದೇಶಕ್ಕೆ ತೆರಳಲಿದ್ದಾರೆ. ಕಳೆದ ವಾರದಲ್ಲೇ ಈ ಕುರಿತು ಜಾನಿ ಬೇರ್‌ಸ್ಟೋ ಸ್ಪಷ್ಟಪಡಿಸಿದ್ದರು.
ಎಡಗೈ ಬ್ಯಾಟ್ಸ್‌ಮನ್‌ ಡೇವಿಡ್‌ ವಾರ್ನರ್‌ ಕೂಡ ಐಪಿಎಲ್‌ ಕೊನೆಯ ಹಂತದಲ್ಲಿ ಆಸ್ಟ್ರೇಲಿಯಾಗೆ ತೆರಳಲಿದ್ದಾರೆ. ಡೇವಿಡ್‌ ವಾರ್ನರ್‌ ಪ್ರಸಕ್ತ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಆಟಗಾರರ ಪೈಕಿ ಅಗ್ರ ಸ್ಥಾನದಲ್ಲಿದ್ದು, ಅವರು 9 ಪಂದ್ಯಗಳಿಂದ 517 ರನ್‌ ಗಳನ್ನು ಸಿಡಿಸಿದ್ದಾರೆ, ಜತೆಗೆ ಜಾನಿ ಬೈರ್‌ ಸ್ಟೋ 445 ರನ್‌ ದಾಖಲಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಇವರಿಬ್ಬರ ನಿರ್ಗಮನದಿಂದ ಹೈದರಾಬಾದ್‌ ತಂಡಕ್ಕೆ ಭಾರಿ ನಷ್ಟವಾಗಲಿದೆ. ಈ ಜೋಡಿ ಇಲ್ಲಿಯವರೆಗೂ ಮೊದಲ ವಿಕೆಟ್‌ ಗೆ 733 ರನ್‌ ಜತೆಯಾಟವಾಡಿದೆ. 
"ಭರ್ಜರಿ ಲಯದಲ್ಲಿರುವ ಡೇವಿಡ್‌ ವಾರ್ನರ್‌ ಹಾಗೂ ಜಾನಿ ಬೈರ್‌ ಸ್ಟೋ ಅವರ ನಿರ್ಗಮನದಿಂದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡಕ್ಕೆ ಭಾರಿ ನಷ್ಟವಾಗಲಿದೆ. ಇವರಿಬ್ಬರು ವಿಶ್ವ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಾಗಿದ್ದು, ಇದುವರೆಗೂ ಅವರು ತಂಡದ ಆಧಾರ ಸ್ಥಂಭಗಳಾಗಿದ್ದರು." ಎಂದು ನಾಯಕ ಕೇನ್‌ ವಿಲಿಯಮ್ಸನ್‌ ಹೇಳಿದ್ದಾರೆ.
ಕಳೆದ ಭಾನುವಾರ ಕೊಲ್ಕತಾ ನೈಟ್‌ ರೈಡರ್ಸ್‌ ವಿರುದ್ಧದ ಪಂದ್ಯದಲ್ಲಿ ವಾರ್ನರ್‌ ಹಾಗೂ ಬೈರ್‌ ಸ್ಟೋ ಜೋಡಿಯು 131 ರನ್ ಜತೆಯಾಟವಾಡಿದ್ದರು. ಇವರಿಬ್ಬರ ಅರ್ಧ ಶತಕಗಳ ನೆರವಿನಿಂದ ಹೈದರಾಬಾದ್‌ 9 ವಿಕೆಟ್‌ಗಳ ಜಯ ಸಾಧಿಸಿತ್ತು.  ಸನ್‌ ರೈಸರ್ಸ್‌ ಹೈದರಾಬಾದ್‌ ಆಡಿರುವ ಒಟ್ಟು 9 ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ನಾಲ್ಕರಲ್ಲಿ ಸೋಲು ಅನುಭವಿಸಿದೆ. ಒಟ್ಟು 10 ಅಂಕಗಳೊಂದಿಗೆ ಗುಂಪು ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT