ವಿರಾಟ್ ಕೊಹ್ಲಿ-ಸರ್ಫರಾಜ್ ಅಹ್ಮದ್ 
ಕ್ರಿಕೆಟ್

ಪ್ರತಿ ಪಂದ್ಯವನ್ನು ಟೀಂ ಇಂಡಿಯಾವನ್ನು ಹೆದರಿಸುವಂತೆ ಆಡುತ್ತೇವೆ: ಪಾಕ್ ನಾಯಕ ಸರ್ಫರಾಜ್ ಎಚ್ಚರಿಕೆ!

ವಿಶ್ವಕಪ್ ಕ್ರಿಕೆಟ್ ಮಹಾಸಮರಕ್ಕೆ ದಿನಗಣನೆ ಶುರುವಾಗಿದ್ದು ಈ ಮಧ್ಯೆ ಪಾಕಿಸ್ತಾನ ನಾಯಕ ಸರ್ಫರಾಜ್ ಅಹ್ಮದ್ ಪಂದ್ಯಾವಳಿಯಲ್ಲಿ ಪ್ರತಿ ಪಂದ್ಯವನ್ನು ಟೀಂ ಇಂಡಿಯಾವನ್ನು ಹೆದರಿಸುವಂತೆ ಆಡುತ್ತೇವೆ...

ಇಸ್ಲಾಮಾಬಾದ್: ವಿಶ್ವಕಪ್ ಕ್ರಿಕೆಟ್ ಮಹಾಸಮರಕ್ಕೆ ದಿನಗಣನೆ ಶುರುವಾಗಿದ್ದು ಈ ಮಧ್ಯೆ ಪಾಕಿಸ್ತಾನ ನಾಯಕ ಸರ್ಫರಾಜ್ ಅಹ್ಮದ್ ಪಂದ್ಯಾವಳಿಯಲ್ಲಿ ಪ್ರತಿ ಪಂದ್ಯವನ್ನು ಟೀಂ ಇಂಡಿಯಾವನ್ನು ಹೆದರಿಸುವಂತೆ ಆಡುತ್ತೇವೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪುಲ್ವಾಮಾ ದಾಳಿ ಬಳಿಕ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಜೊತೆ ಆಡಬೇಕೋ ಅಥವಾ ಬೇಡವೋ ಎಂದು ಭಾರತ ಗೊಂದಲದಲ್ಲಿರುವಾಗಲೇ ಪಾಕ್ ನಾಯಕ ಅಹ್ಮದ್ ಭಾರತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಪಂದ್ಯಾವಳಿಯಲ್ಲಿನ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕು ಎಂದು ನಾಯಕನಾಗಿ ಬಯಸುತ್ತೇನೆ. ಅದಕ್ಕೆ ಸಾಂಪ್ರದಾಯಿಕ ಎದುರಾಳಿ ಭಾರತವೂ ಹೊರತಲ್ಲ. ನಾವು ಆಫ್ಗಾನಿಸ್ತಾನ ತಂಡವನ್ನು ಭಾವಿಸಿದಂತೆ ಭಾರತ ತಂಡವನ್ನು ಭಾವಿಸಿ ಆಡುತ್ತೇವೆ.  
ವಿಶ್ವಕಪ್ ನಲ್ಲಿ ಇಲ್ಲಿಯವರೆಗೂ ಭಾರತವನ್ನು ಸೋಲಿಸಿಲ್ಲ ಎಂಬುದಕ್ಕೆ ಉತ್ತರಿಸಿದ ಅವರು ಇದುವರೆಗೂ ಸೋಲಿಸಿಲ್ಲ ಆದರೆ ಇತ್ತೀಚೆಗೆ ಚಾಂಪಿಯನ್ ಟ್ರೋಫಿಯಲ್ಲಿ ಭಾರತವನ್ನು ಸೋಲಿಸಿ ಚಾಂಪಿಯನ್ ಆಗಿದ್ದನ್ನು ಮರೆಯಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT