ಡೇಲ್‌ ಸ್ಟೈನ್‌ 
ಕ್ರಿಕೆಟ್

ಆರ್‏ಸಿಬಿಗೆ ಮತ್ತೊಂದು ಹಿನ್ನಡೆ: ಭುಜದ ಗಾಯದಿಂದ ಡೇಲ್‌ ಸ್ಟೈನ್‌ ಔಟ್‌!

ಇತ್ತೀಚಿಗಷ್ಟೆ ಆರ್‌ಸಿಬಿ ತಂಡಕ್ಕೆ ಆಗಮಿಸಿದ ದಕ್ಷಿಣ ಆಫ್ರಿಕಾ ಹಿರಿಯ ವೇಗಿ ಡೇಲ್‌ ಸ್ಟೈನ್‌ ಅವರು ಭುಜದ ಉರಿಯೂತ ಸಮಸ್ಯೆಯಿಂದಾಗಿ ಇನ್ನುಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದರಿಂದಾಗಿ ವಿರಾಟ್‌ ಕೊಹ್ಲಿಗೆ ತಲೆ ನೋವಾಗಿ ಪರಿಣಮಿಸಿದೆ.

ಬೆಂಗಳೂರು: ಪ್ರಸಕ್ತ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಸತತ ಮೂರು ಪಂದ್ಯಗಳಲ್ಲಿ ಗೆದ್ದು ವಿಶ್ವಾಸದಲ್ಲಿರುವ ರಾಯಲ್‌ ಚಾಲೆಂಜರ್ಸ್‌ಗೆ ಇದೀಗ ಬಹುದೊಡ್ಡ ಹೊಡೆತ ಬಿದ್ದಿದೆ. ಇತ್ತೀಚಿಗಷ್ಟೆ ಆರ್‌ಸಿಬಿ ತಂಡಕ್ಕೆ ಆಗಮಿಸಿದ ದಕ್ಷಿಣ ಆಫ್ರಿಕಾ ಹಿರಿಯ ವೇಗಿ ಡೇಲ್‌ ಸ್ಟೈನ್‌ ಅವರು ಭುಜದ ಉರಿಯೂತ ಸಮಸ್ಯೆಯಿಂದಾಗಿ ಇನ್ನುಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದರಿಂದಾಗಿ ವಿರಾಟ್‌ ಕೊಹ್ಲಿಗೆ ತಲೆ ನೋವಾಗಿ ಪರಿಣಮಿಸಿದೆ.

ಏ.21 ರಂದು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬೌಲಿಂಗ್‌ ಮಾಡಿದ್ದ ಸ್ಟೈನ್‌ ಅವರಿಗೆ ಬಳಿಕ ಭುಜದ ಉರಿಯೂತ ಸಮಸ್ಯೆ ಉಂಟಾಗಿತ್ತು. ಇದಾದ ಬಳಿಕ ಅವರು ಬುಧವಾರ ನಡೆದ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿದಿರಲಿಲ್ಲ. ಮೇ 30ರಂದು ಐಸಿಸಿ ವಿಶ್ವಕಪ್‌ ಇರುವ ಹಿನ್ನೆಲೆಯಲ್ಲಿ ಬಹುಬೇಗ ಚೇತರಿಸಿಕೊಳ್ಳುವ ಉದ್ದೇಶದಿಂದ ಅವರು ಸ್ವದೇಶಕ್ಕೆ ತೆರಳಲಿದ್ದಾರೆ.

"ಡೇಲ್‌ ಸ್ಟೈನ್‌ ಅವರು ಭುಜದ ಉರಿಯೂತದಿಂದ ಬಳಲುತ್ತಿದ್ದು, ಅವರು ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಅವರ ಉಪಸ್ಥಿತಿಯಲ್ಲಿ ಆರ್‌ಸಿಬಿ ಬೌಲಿಂಗ್‌ ವಿಭಾಗ ಬಲಿಷ್ಟವಾಗಿತ್ತು. ಅಲ್ಲದೇ, ಯುವ ವೇಗಿಗಳಿಗೆ ಅವರು ಸ್ಫೂರ್ತಿ ತುಂಬಿದ್ದರು. ಅವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ನಷ್ಟವಾಗಲಿದೆ" ಎಂದು ಆರ್‌ಸಿಬಿ ತಂಡದ ಮುಖ್ಯಸ್ಥ ಸಂಜೀವ್‌ ಚೂರಿವಾಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಐಪಿಎಲ್‌ ಇನ್ನುಳಿದ ಪಂದ್ಯಗಳಿಗೆ ಸ್ಟೈನ್‌ ಬದಲಿಗೆ ನ್ಯೂಜಿಲೆಂಡ್‌ ಟಿಮ್ ಸೌಥೆ ಅವರಿಗೆ ಅವಕಾಶ ನೀಡಬಹುದು. ಇಲ್ಲವಾದಲ್ಲಿ ಭಾರತದ ಹೊಸ ಬೌಲರ್‌ಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ.

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಆಡಿದ್ದ ಡೇಲ್‌ ಸ್ಟೈನ್‌, 4 ಓವರ್‌ಗಳಲ್ಲಿ 29 ರನ್‌ ನೀಡಿ ಎರಡು ವಿಕೆಟ್‌ ಪಡೆದಿದ್ದರು. ಇದಕ್ಕೂ ಮುನ್ನ ಕೆಕೆಆರ್‌ ವಿರುದ್ಧ 4 ಓವರ್‌ಗಳಿಗೆ 40 ರನ್‌ ನೀಡಿ ಎರಡು ವಿಕೆಟ್‌ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT