ಸಂಗ್ರಹ ಚಿತ್ರ 
ಕ್ರಿಕೆಟ್

ವಿಶ್ವಕಪ್ ಸರಣಿಗೆ ಆಯ್ಕೆಯಾಗದ ಹಿನ್ನಲೆ, ಹೊಸ ತಂಡದಲ್ಲಿ ರಹಾನೆ..!

ಐಸಿಸಿ ವಿಶ್ವಕಪ್ ಕ್ರಿಕೆಟ್ ತಂಡದಲ್ಲಿ ಸ್ಥಾನ ಸಂಪಾದಿಸುವಲ್ಲಿ ವಿಫಲರಾಗಿರುವ ಭಾರತ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಇದೀಗ ಕೌಂಟಿ ಕ್ರಿಕೆಟ್ ನತ್ತ ಮುಖ ಮಾಡಿದ್ದಾರೆ.

ನವದೆಹಲಿ: ಐಸಿಸಿ ವಿಶ್ವಕಪ್ ಕ್ರಿಕೆಟ್ ತಂಡದಲ್ಲಿ ಸ್ಥಾನ ಸಂಪಾದಿಸುವಲ್ಲಿ ವಿಫಲರಾಗಿರುವ ಭಾರತ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಇದೀಗ ಕೌಂಟಿ ಕ್ರಿಕೆಟ್ ನತ್ತ ಮುಖ ಮಾಡಿದ್ದಾರೆ.
ಹೌದು.. ಇಂಗ್ಲೆಂಡ್‌ ಕೌಂಟಿ ಕ್ರಿಕೆಟ್‌ ತಂಡವಾದ ಹ್ಯಾಂಪ್‌ ಶೈರ್‌ ಜತೆ ಒಪ್ಪಂದಕ್ಕೆ ರಹಾನೆ ಸಹಿ ಹಾಕಿದ್ದು, ಮೇ ತಿಂಗಳಿಂದ ಜುಲೈವರೆಗೂ ರಹಾನೆ ಒಟ್ಟು 8 ಪಂದ್ಯಗಳನ್ನು ಆಡಲಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆದಿರುವ ಏಡನ್‌ ಮಾರ್ಕ್ರಾಮ್‌ ಸ್ಥಾನವನ್ನು ರಹಾನೆ ತುಂಬಲಿದ್ದಾರೆ. 
ಮೇ 14ರಂದು ಎಡ್ಜ್‌ ಬಾಸ್ಟನ್‌ ನಲ್ಲಿ ವಾರ್ವಿಕ್ ಶೈರ್‌ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಅವರು ಕೌಂಟಿ ಕ್ರಿಕೆಟ್‌ ಗೆ ಪದಾರ್ಪಣೆ ಮಾಡುವ ನಿರೀಕ್ಷೆ ಇದೆ. ವಿಶ್ವಕಪ್‌ ಬಳಿಕ ಭಾರತ ತಂಡ ವಿಂಡೀಸ್‌ ಪ್ರವಾಸ ಕೈಗೊಳ್ಳಲಿದ್ದು, ಭಾರತದ ಚೇತೇಶ್ವರ ಪೂಜಾರ ಸೇರಿದಂತೆ 7 ಟೆಸ್ಟ್‌ ಸ್ಪೆಷಲಿಸ್ಟ್ ಆಟಗಾರರು ಕೌಂಟಿಯಲ್ಲಿ ಆಡಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಅಂತೆಯೇ ಭಾರತದಿಂದ ಹ್ಯಾಂಪ್ ಶೈರ್‌ ಪರ ಆಡಲಿರುವ ಮೊದಲ ಆಟಗಾರ ಎನ್ನುವ ಹಿರಿಮೆಗೆ ರಹಾನೆ ಪಾತ್ರರಾಗಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT