ಸಂಗ್ರಹ ಚಿತ್ರ 
ಕ್ರಿಕೆಟ್

ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ: ಕಪಿಲ್ ದೇವ್

ಟೀಮ್‌ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಹೇಳಿದ್ದಾರೆ.

ಮುಂಬೈ: ಟೀಮ್‌ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಹೇಳಿದ್ದಾರೆ.
ಐಸಿಸಿ ವಿಶ್ವಕಪ್ ಟೂರ್ನಿ ಅಂತ್ಯದೊಂದಿಗೆ ಹಾಲಿ ಕೋಚ್ ರವಿಶಾಸ್ತ್ರಿ ಅವರ ಒಪ್ಪಂದದ ಅವಧಿ ಕೂಡ ಮುಕ್ತಾಯವಾಗಿದ್ದು, ಈಗಾಗಲೇ ಬಿಸಿಸಿಐ ಕೋಚ್ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ. ಹಾಲಿ ಕೋಚ್ ರವಿಶಾಸ್ತ್ರಿ, ವಿರೇಂದ್ರ ಸೆಹ್ವಾಗ್, ಮಾಜಿ ಟೀಂ ಇಂಡಿಯಾ ಕೋಚ್ ಗ್ಯಾರಿ ಕರ್ಸ್ಟರ್ನ್, ಮಹೇಲಾ ಜಯವರ್ಧನೆ, ಟಾಮ್ ಮೂಡಿ ಸೇರಿದಂತೆ ಘಟಾನುಘಟಿ ಕ್ರಿಕೆಟಿಗರು ಕೋಚ್ ಹುದ್ದೆಯ ರೇಸ್ ನಲ್ಲಿದ್ದಾರೆ.  ಇಂತಹ ಘಾಟಾನುಘಟಿ ಆಟಗಾರರ ನಡುವೆಯೂ ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಹೇಳುವ ಮೂಲಕ ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಅಚ್ಚರಿ ಮೂಡಿಸಿದ್ದಾರೆ.
ಕೋಚ್ ಆಯ್ಕೆ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, 'ಇದು ಕಠಿಣವಲ್ಲ. ನಿಮ್ಮ ಕೆಲಸವನ್ನು ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನೀವು ಮಾಡುತ್ತೀರಿ. ನಿಮ್ಮ ಜವಾಬ್ದಾರಿಗಳನ್ನು ನೀವು ಪೂರೈಸದಿದ್ದಾಗ ಮಾತ್ರ ಅದು ಕಠಿಣವಾಗುತ್ತದೆ' ಎಂದು ಹೇಳಿದ್ದಾರೆ. ಪೂರ್ವ ಬಂಗಾಳ ಕ್ಲಬ್‌ ನ ಶತಮಾನೋತ್ಸವದ ಸಂದರ್ಭದಲ್ಲಿ 'ಭಾರತ್ ಗೌರವ್' ಪ್ರಶಸ್ತಿಯನ್ನು ಸ್ವೀಕರಿಸಲು ಕಪಿಲ್ ದೇವ್ ಬಂದಿದ್ದರು. 
ಈ ವೇಳೆ ನಾಯಕ ವಿರಾಟ್ ಕೊಹ್ಲಿ ಅವರು ಹಾಲಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರನ್ನು ಮತ್ತೊಂದು ಅವಧಿಗೆ ಬಹಿರಂಗವಾಗಿ ಬೆಂಬಲಿಸಿದ್ದಾರೆ ಎಂಬ ಅಂಶಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಕಪಿಲ್ ದೇವ್‌ ನಿರಾಕರಿಸಿದರು. ರವಿಶಾಸ್ತ್ರಿ ಅವರು ಮುಂದಿನ ಕೋಚ್‌ ಆಗಿ ಮುಂದುವರಿಯಲಿ ಎನ್ನುವುದು ನಾಯಕ ವಿರಾಟ್‌ ಅಭಿಪ್ರಾಯವದು. ಅದು ನನ್ನದಲ್ಲ. ಎಲ್ಲರಿಗೂ ಅವರದೇ ಆದ ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರವಿದೆ. ಹಾಗಾಗಿ, ಇದರ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಹೇಳಿದರು.
ಇನ್ನು  ಭಾರತ ತಂಡದ ಮುಖ್ಯ ತರಬೇತದಾರ ನೇಮಕ ಮಾಡುವ ಪ್ರಯತ್ನದಲ್ಲಿರುವ ಕಪಿಲ್ ದೇವ್, ಅಂಶುಮಾನ್‌ ಗಾಯಕ್ವಾಡ್‌ ಮತ್ತು ಶಾಂತ ರಂಗಸ್ವಾಮಿ ಅವರನ್ನೊಳಗೊಂಡ ಕೋಚ್ ಹುದ್ದೆಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲನೆಯಲ್ಲಿ ತಲ್ಲೀನರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT