ನವದೀಪ್ ಸೈನಿ-ಗೌತಮ್ ಗಂಭೀರ್ 
ಕ್ರಿಕೆಟ್

ನಿನ್ನ ಕ್ರಿಕೆಟ್ ಜೀವನ ಮುಗಿಸಲು ನಿಂತವರ ಮಧ್ಯದ ವಿಕೆಟ್ ಉರುಳಿದೆ: ಗೌತಮ್ ಗಂಭೀರ್ ಕಿಡಿ

ಟೀಂ ಇಂಡಿಯಾ ಪರ ಪಾದಾರ್ಪಣೆ ಪಂದ್ಯದಲ್ಲೇ ನವದೀಪ್ ಸೈನಿ ಅದ್ಭುತ ಬೌಲಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ವಿಚಾರವನ್ನೇ ಟ್ವೀಟ್ ಮಾಡಿರುವ ಮಾಜಿ...

ನವದೆಹಲಿ: ಟೀಂ ಇಂಡಿಯಾ ಪರ ಪಾದಾರ್ಪಣೆ ಪಂದ್ಯದಲ್ಲೇ ನವದೀಪ್ ಸೈನಿ ಅದ್ಭುತ ಬೌಲಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ವಿಚಾರವನ್ನೇ ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಚೇತನ್ ಮತ್ತು ಬಿಷನ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯದಲ್ಲಿ ನವದೀಪ್ ಸೈನಿ ಮೂರು ವಿಕೆಟ್ ಪಡೆದಿದ್ದಾರೆ. ಇನ್ನು ಸೈನಿ ಈ ಮಟ್ಟಿನ ಬೆಳವಣಿಗೆಯ ಹಿಂದೆ ಇರುವ ಶಕ್ತಿ ಗಂಭೀರ್ ಎಂಬ ವಿಷಯ ಬಹಿರಂಗಗೊಂಡಿದೆ.
ಈ ಹಿಂದೆ ರಣಜಿ ಕ್ರಿಕೆಟ್ ತಂಡಕ್ಕೆ ನವದೀಪ್ ಸೈನಿಯನ್ನು ಆಯ್ಕೆ ಮಾಡಲು ಗಂಭೀರ್ ಪ್ರಯತ್ನ ಪಟ್ಟಾಗ ಮಾಜಿ ಕ್ರಿಕೆಟಿಗ ಬಿಷನ್ ಸಿಂಗ್ ಬೇಡಿ ಮತ್ತು ಚೇತನ್ ಚೌಹಾಣ್ ವಿರೋಧಿಸಿದ್ದರು. 
ಸದ್ಯ ಸೈನಿ ಪ್ರದರ್ಶನ ಕುರಿತಂತೆ ಗಂಭೀರ್ ಟ್ವೀಟ್ ಮಾಡಿದ್ದಾರೆ. ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುತ್ತಿರುವುದಕ್ಕೆ ಸೈನಿಗೆ ಅಭಿನಂದನೆಗಳು. ಸೈನಿ ನೀನು ಮಾಡಿದ ಮೊದಲ ಓವರ್ ನಲ್ಲೇ ಎರಡು ವಿಕೆಟ್ ಪಡೆದಿದ್ದೀಯಾ. ನೀನು ಅಂಗಳಕ್ಕೆ ಇಳಿಯುವ ಮುನ್ನ ನಿನ್ನ ಕ್ರಿಕೆಟ್ ಜೀವನವನ್ನು ಮುಗಿಸಲು ಯೋಚನೆ ಮಾಡಿದ್ದ ಬಿಷನ್ ಸಿಂಗ್ ಬೇಡಿ ಮತ್ತು ಚೇತನ್ ಚೌಹಾಣ್ ರ ಮಧ್ಯದ ವಿಕೆಟ್ ಈಗ ಉರುಳಿ ಬಿದ್ದಿದೆ ಎಂದು ಖಾರವಾಗಿಯೇ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT