ಯುವರಾಜ್ ಸಿಂಗ್ 
ಕ್ರಿಕೆಟ್

ವಿದೇಶಿ ಟಿ- 20 ಲೀಗ್: ಟೀ ಇಂಡಿಯಾ ಆಟಗಾರರಿಗೆ ಎನ್ ಓಸಿ ಇಲ್ಲ, ಯುವಿಗೆ ವಿನಾಯ್ತಿ

ಟೀಮ್ ಇಂಡಿಯಾ ಆಟಗಾರರು ವಿದೇಶಗಳಲ್ಲಿ ನಡೆಯುವ ಟಿ - 20 ಲೀಗ್‌ಗಳಲ್ಲಿ ಪಾಲ್ಗೊಳ್ಳಲು ಇನ್ನು ಮುಂದೆ ನಿರಾಕ್ಷೇಪ ಪ್ರಮಾಣ ಪತ್ರ(ಎನ್‌ಒಸಿ) ನೀಡುವುದಿಲ್ಲ ಎಂದು ಬಿಸಿಸಿಐ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಮುಂಬೈ: ಟೀಮ್ ಇಂಡಿಯಾ ಆಟಗಾರರು ವಿದೇಶಗಳಲ್ಲಿ ನಡೆಯುವ ಟಿ - 20 ಲೀಗ್‌ಗಳಲ್ಲಿ ಪಾಲ್ಗೊಳ್ಳಲು ಇನ್ನು ಮುಂದೆ ನಿರಾಕ್ಷೇಪ ಪ್ರಮಾಣ ಪತ್ರ(ಎನ್‌ಒಸಿ) ನೀಡುವುದಿಲ್ಲ ಎಂದು ಬಿಸಿಸಿಐ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಈ ವಿಷಯ ಕುರಿತು ಆಡಳಿತ ಮಂಡಳಿಯಲ್ಲಿ ಚರ್ಚೆ ನಡೆಸಲಾಗಿದೆ. ಆದರೆ ಯುವರಾಜ್ ಸಿಂಗ್ ಅವರಿಗೆ ಕೆನಡಾ ಗ್ಲೋಬಲ್ ಟಿ -20 ಲೀಗ್‌ನಲ್ಲಿ ಭಾಗವಹಿಸಲು ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಆದರೆ ಇನ್ನುಮುಂದೆ ಯಾವುದೇ ಆಟಗಾರನಿಗೆ ಎನ್‌ಒಸಿ ನೀಡುವುದಿಲ್ಲ ಎಂದು ಆಂಗ್ಲ ಪತ್ರಿಕೆಯೊಂದಕ್ಕೆ ಅಧಿಕಾರಿ ತಿಳಿಸಿದ್ದಾರೆ.

ಈ ವಿಷಯದಲ್ಲಿ ಸ್ಥಿರತೆ ಇರಬೇಕು, ಆದರೆ ಪ್ರಸ್ತುತ ಆಡಳಿತ ಮಂಡಳಿ ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆಟಗಾರರ ವೃತ್ತಿ ಜೀವನದ ಬಗ್ಗೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸೂಕ್ತವಲ್ಲ. ಮತ್ತೊಂದೆಡೆ, ಟೀಮ್ ಇಂಡಿಯಾದಲ್ಲಿ ನಿವೃತ್ತಿಯ ಬಗ್ಗೆ ಯೋಚಿಸುತ್ತಿರುವ ಕೆಲವರು, ಟಿ-20 ಲೀಗ್‌ಗಳಲ್ಲಿ ಆಡಲು ಬಯಸಿದ್ದಾರೆ. ಕೆಲವು  ಮಾಜಿ ಆಟಗಾರರು ಸನ್ನದ್ಧರಾಗಿದ್ದಾರೆ. ಆಡಳಿತಗಾರರ ಸಮಿತಿ ಕೈಗೊಂಡಿರುವ ನಿರ್ಧಾರ ಈ ಆಟಗಾರರ ಆಸೆಗೆ ತಣ್ಣೀರು ಎರಚಿದಂತಾಗಿದೆ.

"ನಿವೃತ್ತಿ ಸಾರ್ವತ್ರಿಕವಲ್ಲ. ಯಾವುದೇ ದೇಶ ತನ್ನ ಮಾಜಿ ಆಟಗಾರರಿಗೆ ಟಿ 20 ಲೀಗ್‌ಗಳಲ್ಲಿ ಆಡಲು ಅವಕಾಶ ನೀಡಿದರೆ, ಅದು ಐಸಿಸಿ ಸಮಸ್ಯೆಯಾಗುತ್ತದೆ" ಎಂದು ಅಧಿಕಾರಿ ಹೇಳಿದ್ದಾರೆ. ಆದರೆ, ಐಸಿಸಿ ಇದರ ಬಗ್ಗೆ ತಲೆಕಡಿಸಿಕೊಳ್ಳುವುದಿಲ್ಲ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT