ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಆಗಿ ರವಿಶಾಸ್ತ್ರಿ ಮುಂದುವರಿಕೆ: ಎರಡು ವರ್ಷ ಗುತ್ತಿಗೆ ವಿಸ್ತರಣೆ

ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರವಿಶಾಸ್ತ್ರಿ ಪುನರ್ ಆಯ್ಕೆಯಾಗಿದ್ದಾರೆ. ಮಾಜಿ ಆಟಗಾರ ಕಪೀಲ್ ದೇವ್, ಅಂಶುಮನ್ ಗಾಯಕ್ ವಾಡ್ ಮತ್ತು ಶಾಂತ ರಂಗಸ್ವಾಮಿ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ ಇಂದು ಅವರ ಗುತ್ತಿಗೆ ಅವಧಿಯನ್ನು 2021ರವರೆಗೂ ವಿಸ್ತರಿಸಿದೆ.

ಮುಂಬೈ: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರವಿಶಾಸ್ತ್ರೀ ಪುನರ್ ಆಯ್ಕೆಯಾಗಿದ್ದಾರೆ. ಮಾಜಿ ಆಟಗಾರ ಕಪೀಲ್ ದೇವ್ , ಅಂಶುಮನ್ ಗಾಯಕ್ ವಾಡ್ ಮತ್ತು ಶಾಂತ ರಂಗಸ್ವಾಮಿ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ ಇಂದು ರವಿಶಾಸ್ತ್ರೀ ಅವರನ್ನು ಮರು ಆಯ್ಕೆ ಮಾಡಿದ್ದು, ಅವರ ಗುತ್ತಿಗೆ ಅವಧಿಯನ್ನು ನವೆಂಬರ್ 24, 2021ರವರೆಗೂ ವಿಸ್ತರಿಸಿದೆ.

ಮೂವರು ಸದಸ್ಯರು ಇಂದು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಸಂದರ್ಶನ ನಡೆಸಿದ್ದು, ರವಿಶಾಸ್ತ್ರೀ  ಮರು ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದಂತೆ ಮೈಕ್ ಹೆಸನ್ ದ್ವಿತೀಯ ಹಾಗೂ ಟೊಮ್ ಮೊಡಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ನಾಲ್ವರು ಅಭ್ಯರ್ಥಿಗಳು ಕೋಚ್ ಹುದ್ದೆಯ ರೇಸ್ ನಲ್ಲಿದ್ದರು. ಈ ಪೈಕಿ ಫಿಲ್ ಸೈಮನ್ಸ್ ಸ್ವ ಇಚ್ಟೆಯಿಂದ ಹೊರಗುಳಿದರೆ, ಹೆಸನ್ , ಮೂಡಿ, ರಾಬಿನ್ ಸಿಂಗ್ ಹಾಗೂ ಲಾಲ್  ಚಂದ್ ರಜಪೂತ್ ಅವರು ಕ್ರಿಕೆಟ್ ಸಲಹಾ ಸಮಿತಿ ಮುಂದೆ ಸಂದರ್ಶನಕ್ಕೊಳಗಾದರು. 

ಸನ್ ರೈಸರ್ಸ್ ಹೈದ್ರಾಬಾದ್ ಮಾಜಿ ಮುಖ್ಯ ಕೋಚ್ ಟಾಮ್ ಮೂಡಿ 2017ರಲ್ಲಿಯೇ ನಿರಾಕರಿಸಿದ್ದರು. ನ್ಯೂಜಿಲೆಂಡ್ ತಂಡದ ಮಾಜಿ ಕೋಚ್  ಹೆಸ್ಸನ್  ರವಿಶಾಸ್ತ್ರೀಗೆ ಪ್ರಬಲ ಪೈಪೋಟಿ ನೀಡಿದರು. ಆದರೆ, ಅಂತಿಮವಾಗಿ ರವಿಶಾಸ್ತ್ರೀ ಹುದ್ದೆ ಮರಳಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT