ಸೈಯದ್ ಮುಷ್ತಾಕ್ ಅಲಿ ಟಿ 20: ಹಾಲಿ ಚಾಂಪಿಯನ್ ಕರ್ನಾಟಕಕ್ಕೆ 1ರನ್ ರೋಚಕ ಜಯ! 
ಕ್ರಿಕೆಟ್

ಸೈಯದ್ ಮುಷ್ತಾಕ್ ಅಲಿ ಟಿ 20: ಹಾಲಿ ಚಾಂಪಿಯನ್ ಕರ್ನಾಟಕಕ್ಕೆ 1ರನ್ ರೋಚಕ ಜಯ!

ಸೈಯದ್ ಮುಷ್ತಾಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಎದುರಾಳಿ ತಮಿಳುನಾಡಿನ ವಿರುದ್ಧ ಹಾಲಿ ಚಾಂಪಿಯನ್ ಕರ್ನಾಟಕ ಒಂದು ರನ್ ಅಂತರದ ರೋಚಕ ಜಯ ದಾಖಲಿಸಿದೆ. 

ಸೂರತ್: ಸೈಯದ್ ಮುಷ್ತಾಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಎದುರಾಳಿ ತಮಿಳುನಾಡಿನ ವಿರುದ್ಧ ಹಾಲಿ ಚಾಂಪಿಯನ್ ಕರ್ನಾಟಕ ಒಂದು ರನ್ ಅಂತರದ ರೋಚಕ ಜಯ ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಕರ್ನಾಟಕ ತಂಡ ಮನೀಷ್ ಪಾಂಡೆ ಅರ್ಧ ಶತಕದ ಸಹಾಯದಿಂದ ನಿಗದಿತ 20 ಓವರ್ ಗಳಿಗೆ ಐದು ವಿಕೆಟ್ ನಷ್ಟಕ್ಕೆ 180 ರನ್ ದಾಖಲಿಸಿತು. ಆ ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಿದ ತಮಿಳುನಾಡು ಬಾಬಾ ಅಪರಾಜಿತ್ (40), ವಿಜಯ ಶಂಕರ್(44) ಅವರ ಉತ್ತಮ ಪ್ರದರ್ಶನದ ಹೊರತಾಗಿಯೂ ನಿಗದಿತ ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 179 ರನ್ ಗಳಿಸಲಷ್ಟೇ ಸಾಧ್ಯವಾಗಿತ್ತು. ಈ ಮೂಲಕ ಕರ್ನಾಟಕಕ್ಕೆ ಒಂದು ರನ್ ಜಯ ಲಭಿಸುಇದ್ದು ಚಾಂಪಿಯನ್ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡಿದೆ.

ತಮಿಳುನಾಡಿನ ಪರ ನಾಯಕ ದಿನೇಶ್ ಕಾರ್ತಿಕ್ 20, ವಾಷಿಂಗ್ಟನ್ ಸುಂದರ್ 24, ಶಾರುಖ್ ಖಾನ್ 16, ಹರಿ ನಿಶಾಂತ್14, ರವಿಚಂದ್ರನ್ ಅಶ್ವಿನ್ ಅಜೇಯ 16 ರನ್ ಕಲೆ ಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT