ಶಿಖರ್ ಧವನ್ 
ಕ್ರಿಕೆಟ್

ವಿಂಡೀಸ್ ವಿರುದ್ಧದ ಏಕದಿನ ಸರಣಿಯಿಂದಲೂ ಶಿಖರ್ ಧವನ್ ಹೊರಗೆ?

ಗಾಯದ ಸಮಸ್ಯೆಯಿಂದ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಟಿ-20  ಸರಣಿಯಿಂದ ಹೂರಗುಳಿದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್, ಏಕದಿನ ಪಂದ್ಯಗಳಿಂದಲೂ ಹೊರಗುಳಿಯುವ ಸಾಧ್ಯತೆ ಇದೆ

ನವ ದೆಹಲಿ: ಗಾಯದ ಸಮಸ್ಯೆಯಿಂದ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಟಿ-20  ಸರಣಿಯಿಂದ ಹೂರಗುಳಿದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್, ಏಕದಿನ ಪಂದ್ಯಗಳಿಂದಲೂ ಹೊರಗುಳಿಯುವ ಸಾಧ್ಯತೆ ಇದೆ. ಆರಂಭದಲ್ಲಿ ತಂಡಕ್ಕೆ ಸೇರ್ಪಡೆಯಾಗಿದ್ದ ಧವನ್ ಬಳಿಕ ಅವರನ್ನು ಕೈ ಬಿಟ್ಟು ಸಂಜು ಸ್ಯಾಮ್ಸನ್ ಅವರನ್ನು  ಆಯ್ಕೆ ಮಾಡಲಾಗಿದೆ.

ನಾಳೆ ಮುಂಬೈಯಲ್ಲಿ ನಡೆಯಲಿರುವ  ಅಂತಿಮ ಟಿ-20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆಡುವ ಸಾಧ್ಯತೆ ಇದ್ದು, ಡಿಸೆಂಬರ್ 15ರಿಂದ ಚೆನ್ನೈಯಲ್ಲಿ ಏಕದಿನ ಸರಣಿ ಆರಂಭವಾಗಲಿದೆ. 

ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಶಿಖರ್ ಧವನ್ ಎಡ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದರು. ಹೀಗಾಗಿ ಬಿಸಿಸಿಐ ವೈದ್ಯಕೀಯ ತಂಡವು ಮಂಗಳವಾರ ಪರೀಕ್ಷೆ ನಡೆಸಿ, ಗಾಯವನ್ನು ಗುಣಪಡಿಸಲು ಸಮಯ ಬೇಕಾಗುತ್ತದೆ. ಅವರಿಗೆ ಸ್ವಲ್ಪ ಸಮಯದ ವಿಶ್ರಾಂತಿ ಅತ್ಯವಿದೆ ಎಂದು ತಿಳಿಸಿದೆ. 

ಶಿಖರ್  ಧವನ್ ಅವರ ಸ್ಥಾನದಲ್ಲಿ  ಆಡಲು ಸಂಜು ಸ್ಯಾಮ್ಸನ್ ,  ಶುಬ್ ಮನ್ ಗಿಲ್ ಹಾಗೂ ಟೆಸ್ಟ್ ಆರಂಭಿಕ ಆಟಗಾರ ಮಾಯಾಂಕ್ ಅಗರ್ ವಾಲ್  ನಡುವೆ ಪೈಪೋಟಿ  ಇದೆ. 

ಏಕದಿನ ಸರಣಿಯ ಟೀಂ ಇಂಡಿಯಾ ಇಂತಿದೆ
ವಿರಾಟ್ ಕೊಹ್ಲಿ ( ನಾಯಕ) ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್. ರಾಹುಲ್, ಶ್ರೇಯಸ್ಸು ಅಯ್ಯರ್, ಮನೀಷ್ ಪಾಂಡೆ, ರಿಷಭ್ ಪಂತ್ ( ವಿಕೆಟ್ ಕೀಪರ್ ) ಶಿವಂ ದುಬೆ, ಕೇದಾರ್ ಜಾಧವ್,  ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್,  ಕುಲದೀಪ್ ಯಾದವ್, ದೀಪಕ್ ಚಾಹರ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT