ಸಂಗ್ರಹ ಚಿತ್ರ 
ಕ್ರಿಕೆಟ್

ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ; ಗಾಯಾಳು ಧವನ್ ಔಟ್, ಮಯಾಂಕ್ ಅಗರ್ವಾಲ್ ಇನ್!

ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ ಮಾಡಲಾಗಿದ್ದು, ಮೊಣಕಾಲು ಗಾಯದಿಂದ ಬಳಲುತ್ತಿರುವ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ರನ್ನು ಆಯ್ಕೆ ಮಾಡಲಾಗಿದೆ.

ನವದೆಹಲಿ: ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ ಮಾಡಲಾಗಿದ್ದು, ಮೊಣಕಾಲು ಗಾಯದಿಂದ ಬಳಲುತ್ತಿರುವ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ರನ್ನು ಆಯ್ಕೆ ಮಾಡಲಾಗಿದೆ.

ಇದೇ ಡಿಸೆಂಬರ್ 15 ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ತಂಡದಿಂದ ಗಾಯಾಳು ಶಿಖರ್ ಧವನ್ ಅವರನ್ನು ಕೈ ಬಿಡಲಾಗಿದೆ. ಅವರ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ರನ್ನು ಆಯ್ಕೆ ಮಾಡಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡ ಒಟ್ಟು ಮೂರು ಏಕದಿನ ಪಂದ್ಯಗಳನ್ನಾಡಲಿದ್ದು, ಮೊದಲನೇ ಪಂದ್ಯ ಡಿಸೆಂಬರ್ 15 ರಂದು ಚೆನ್ನೈ ನಲ್ಲಿ, ಎರಡನೇ ಪಂದ್ಯ ಡಿ.18 ರಂದು ವಿಶಾಖಪಟ್ಟಣಂ ನಲ್ಲಿ ಹಾಗೂ ಕೊನೆಯ ಪಂದ್ಯ ಡಿ.22 ರಂದು ಕಟಕ್‌ನಲ್ಲಿ ಜರುಗಲಿದೆ. 

ಈ ಹಿಂದೆ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಪಂದ್ಯದ ವೇಳೆ ಎಡಗೈ ಆರಂಭಿಕ ಶಿಖರ್ ಧವನ್ ಅವರ ಮೊಣಕಾಲಿಗೆ ಗಾಯವಾಗಿತ್ತು. ಹಾಗಾಗಿ, ವೆಸ್ಟ್‌ ಇಂಡೀಸ್ ವಿರುದ್ಧದ ಟಿ-20 ಸರಣಿಗೆ ಅವರ ಸ್ಥಾನಕ್ಕೆ ಸಂಜು ಸ್ಯಾಮ್ಸನ್‌ ಗೆ ಅವಕಾಶ ಕಲ್ಪಿಸಲಾಗಿತ್ತು. ಆ ಬಳಿಕ ಧವನ್ ವಿಂಡೀಸ್ ವಿರುದ್ಧದ ಏಕದಿನ ಸರಣಿ ಹೊತ್ತಿಗೆ ಚೇತರಿಸಿಕೊಳ್ಳುವ ವಿಶ್ವಾಸವಿತ್ತಾದರೂ, ಅದು ಸಾಧ್ಯವಾಗದ ಹಿನ್ನಲೆಯಲ್ಲಿ ಅವರ ಬದಲಿಗೆ ಮಯಾಂಕ್ ಅಗರ್ವಾಲ್ ಅವರಿಗೆ ಅವಕಾಶ ನೀಡಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಇಂತಿದೆ.
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಮಾಯಾಂಕ್ ಅಗರ್ವಾಲ್, ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ಕೇದಾರ್ ಜಾಧವ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಚಹರ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT