ಸಂಗ್ರಹ ಚಿತ್ರ 
ಕ್ರಿಕೆಟ್

ವಿಂಡೀಸ್ ವಿರುದ್ಧ ಏಕದಿನ ಸರಣಿ: ಭುವಿ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನ

ಪ್ರಮುಖ ಬೆಳವಣಿಗೆಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ವೇಗಿ ಭುವನೇಶ್ವರ್ ಕುಮಾರ್ ಬದಲಿಗೆ ಉದಯೋನ್ಮುಖ ಆಟಗಾರ ಶಾರ್ದೂಲ್ ಠಾಕೂರ್ ಗೆ ಸ್ಥಾನ ನೀಡಲಾಗಿದೆ.

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ವೇಗಿ ಭುವನೇಶ್ವರ್ ಕುಮಾರ್ ಬದಲಿಗೆ ಉದಯೋನ್ಮುಖ ಆಟಗಾರ ಶಾರ್ದೂಲ್ ಠಾಕೂರ್ ಗೆ ಸ್ಥಾನ ನೀಡಲಾಗಿದೆ.

ಪ್ರಸ್ತುತ ಭಾರತ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಗೆದ್ದು ಬೀಗಿರುವ ಕೊಹ್ಲಿ ಪಡೆ ಇದೀಗ ಏಕದಿನ ಸರಣಿ ಮೇಲೆ ಕಣ್ಣಿಟ್ಟಿದೆ. ಇದೇ ಡಿಸೆಂಬರ್ 15 ಭಾನುವಾರ ಭಾರತ ತಂಡ ವಿಂಡೀಸ್ ವಿರುದ್ಧ ತನ್ನ ಮೊದಲ ಪಂದ್ಯವನ್ನಾಡಲಿದೆ. ಚೆನ್ನೈ ನಲ್ಲಿ ನಡೆಯಲಿರುವ ಮೊದಲ ಪಂದ್ಯ ನಡೆಯಲಿದ್ದು, ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಸಮಿತಿ ತಂಡ ಪ್ರಕಟ ಮಾಡಿದೆ.

ಭಾರತ ತಂಡದ ಪ್ರಮುಖ ವೇಗಿ ಭುವನೇಶ್ವರ್ ಕುಮಾರ್ ಗೆ ವಿಂಡೀಸ್ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಭುವಿ ಬದಲಿಗೆ ಉದಯೋನ್ಮುಖ ಆಟಗಾರ ಶಾರ್ದೂಲ್ ಠಾಕೂರ್ ಗೆ ಸ್ಥಾನ ಕಲ್ಪಿಸಲಾಗಿದೆ. 

ತಂಡ ಇಂತಿದೆ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಮಾಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಮ್ ದುಬೆ, ಕೇದಾರ್ ಜಾಧವ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಚಹರ್, ಮೊಹಮ್ಮದ್ ಶಮಿ, ಶಾರ್ದುಲ್ ಠಾಕೂರ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT