ಪ್ರವೀಣ್ ಕುಮಾರ್ 
ಕ್ರಿಕೆಟ್

ಕುಡಿದ ಮತ್ತಿನಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮಗುವನ್ನು ತಳ್ಳಿದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್

ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ತನ್ನ ಏಳು ವರ್ಷದ ಮಗನನ್ನು ಹೊಡೆದು ತಳ್ಳುವುದಲ್ಲದೆ ತನ್ನ ಮೇಲೆ ಹಲ್ಲೆ ನಡೆದ್ದಾಗಿ ಉತ್ತರ ಪ್ರದೇಶದ ಮೀರತ್ ನ ನಿವಾಸಿಯೊಬ್ಬ ದೂರಿದ್ದಾರೆ. 

ಮೀರತ್: ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ತನ್ನ ಏಳು ವರ್ಷದ ಮಗನನ್ನು ಹೊಡೆದು ತಳ್ಳುವುದಲ್ಲದೆ ತನ್ನ ಮೇಲೆ ಹಲ್ಲೆ ನಡೆದ್ದಾಗಿ ಉತ್ತರ ಪ್ರದೇಶದ ಮೀರತ್ ನ ನಿವಾಸಿಯೊಬ್ಬ ದೂರಿದ್ದಾರೆ. 

"ಇಬ್ಬರೂ ನೆರೆಹೊರೆಯವರು ಮತ್ತು ಅವರು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರ ಹೇಳಿಕೆಗಳ ಆಧಾರದ ಮೇಲೆ ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಅದಕ್ಕೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ವೈದ್ಯಕೀಯ ದಾಖಲೆಗಳನ್ನು ಸಹ ಪರಿಗಣಿಸಲಾಗುತ್ತದೆ" ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಖಿಲೇಶ್ ನಾರಾಯಣ್ ಹೇಳಿದ್ದಾರೆ.

ಆದರೆ ಇನ್ನೊಂದೆಡೆ ಈ ದೂರು ಅಂತರಾಷ್ಟ್ರೀಯ ಕ್ರಿಕೆಟಿಗನೊಬ್ಬನ ಸಂಬಂಧಿಸಿರುವ ಕಾರಣ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಪೊಲೀಸರು ತಮ್ಮ ದೂರನ್ನು ದಾಖಲಿಸಲು ನಿರಾಕರಿಸಿದ್ದಾರೆ ಎಂದು ಸಂತ್ರಸ್ಥ ಬಾಲಕನ ತಂದೆ ಹೇಳಿಕೊಂಡಿದ್ದಾರೆ.

"ನಾನು ಮಧ್ಯಾಹ್ನ 3: 00 ಕ್ಕೆ ಬಸ್ ನಿಲ್ದಾಣದಲ್ಲಿ ನನ್ನ ಮಗನಿಗಾಗಿ ಕಾಯುತ್ತಿದ್ದೆ. ಕುಮಾರ್ ಸ್ಥಳಕ್ಕೆ ಬಂದು, ತನ್ನ ಕಾರಿನಿಂದ ಹೊರಬಂದು ಮೊದಲು ಬಸ್ ಚಾಲಕನನ್ನು ನಿಂದಿಸಿದನು ಮತ್ತು ನಂತರ ನನ್ನನ್ನು ನಿಂದಿಸಿದನು. ಅವನು ಮದ್ಯಪಾನ ಮಾಡಿದ್ದವರಂತೆ ಕಾಣುತ್ತಿದ್ದರು. ನನ್ನ ಮೇಲೆ ಅವರು ಹಲ್ಲೆ ನಡೆಸಿದ್ದಾರೆ ಹಾಗೆಯೇ ಕೈ ಮುರಿದಿದ್ದಾರೆ.

"ನನ್ನ ಮಗನನ್ನೂ ಸಹ ಪ್ರವೀಣ್ ತಳ್ಳಿದ್ದಾರೆ. ಆದರೆ ಪೋಲೀಸರಿಗೆ ಈ ಬಗ್ಗೆ ದೂರು ಕೊಡಲು ಹೋದಾಗ ರಾಜಿ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇನ್ನು ಈ ಸಂಬಂಧ ನನಗೆ ಜೀವ ಬೆದರಿಕೆಗಳು ಬರಲಾರಂಭಿಸಿದೆ"ಅವರು ಹೇಳಿದರು

ಆದರೆ ಘಟನೆ ಸಂಬಂಧ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಇನ್ನೂ ಯಾವ ಹೇಳಿಕೆಯನ್ನೂ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಕೇರಳ ಚುನಾವಣೆ: ಕಮ್ಯುನಿಸ್ಟ್‌ ಮುಕ್ತ ಭಾರತಕ್ಕೆ ಕಾಂಗ್ರೆಸ್ ಪಣ; ಮೈತ್ರಿ ವಿರುದ್ಧವೇ ತೊಡೆ ತಟ್ಟಿದ LDF (ನೇರ ನೋಟ)

ಕಲಬುರಗಿಯಲ್ಲಿ ಪತ್ತೆಯಾದ ಪ್ರಾಚೀನ ಬೌದ್ಧ ಮಠದ ವಿಸ್ತೃತ ಉತ್ಖನನ ಕೈಗೊಳ್ಳಿ: ಕೇಂದ್ರಕ್ಕೆ ಖರ್ಗೆ ಒತ್ತಾಯ

ಆಪರೇಷನ್‌ ಕಮಲದ ಆತಂಕ: ಅಸ್ಸಾಂ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

ರಾಜ್ಯದ 470 ಹಳ್ಳಿಗಳಿಗೆ ಮೊಬೈಲ್ ನೆಟ್​ವರ್ಕೇ ಇಲ್ಲ..!

SCROLL FOR NEXT