ನವದೆಹಲಿ: ಕಳೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ವೈಫಲ್ಯ ಅನುಭವಿಸಲು ಟೀಮ್ ಮ್ಯಾನೇಜ್ಮೆಂಟ್ ಯೋಜನೆಗಳೇ ಕಾರಣ ಎಂದು ಭಾರತ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.
ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ಇದೇ ವರ್ಷ ನಡೆದಿದ್ದ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ, ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು. ಆ ಮೂಲಕ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಕೊಹ್ಲಿ ಪಡೆ ನಾಲ್ಕನೇ ಸ್ಥಾನಕ್ಕೆೆ ತೃಪ್ತಿಿಪಟ್ಟಿತ್ತು.
ವಿಶ್ವಕಪ್ ಟೂರ್ನಿಗಾಗಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಕೈಗೊಂಡ ಯೋಜನೆಗಳೆಲ್ಲವೂ ತಪ್ಪಾಗಿದ್ದವು ಎಂದು ಯುವಿ ಆರೋಪಿಸಿದ್ದಾರೆ.