ರಣಜಿ ಟ್ರೋಫಿ: ಶೌಕತ್ ಶತಕ, ಕರ್ನಾಟಕ-ಉತ್ತರ ಪ್ರದೇಶ ಪಂದ್ಯ ಡ್ರಾ 
ಕ್ರಿಕೆಟ್

ರಣಜಿ ಟ್ರೋಫಿ: ಶೌಕತ್ ಶತಕ, ಕರ್ನಾಟಕ-ಉತ್ತರ ಪ್ರದೇಶ ಪಂದ್ಯ ಡ್ರಾ

ಇಲ್ಲಿನ ರಾಜನಗರದ ಕೆಎಸ್ ಸಿಎ ಅಂಗಳದಲ್ಲಿ ನಡೆದೆ ಪಂದ್ಯದಲ್ಲಿ ಕರ್ನಾಟಕ ಹಾಗೂ ಉತ್ತರ ಪ್ರದೇಶ ತಂಡಗಳು ನಿರೀಕ್ಷೆಯಂತೆ ಡ್ರಾ ಸಾಧಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದ ಕರ್ನಾಟಕ ತಂಡಕ್ಕೆ ಮೂರು ಹಾಗೂ ಉತ್ತರ ಪ್ರದೇಶ ತಂಡಕ್ಕೆ ಒಂದು ಅಂಕ ಲಭಿಸಿದೆ.

ಹುಬ್ಬಳ್ಳಿ: ಇಲ್ಲಿನ ರಾಜನಗರದ ಕೆಎಸ್ ಸಿಎ ಅಂಗಳದಲ್ಲಿ ನಡೆದೆ ಪಂದ್ಯದಲ್ಲಿ ಕರ್ನಾಟಕ ಹಾಗೂ ಉತ್ತರ ಪ್ರದೇಶ ತಂಡಗಳು ನಿರೀಕ್ಷೆಯಂತೆ ಡ್ರಾ ಸಾಧಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದ ಕರ್ನಾಟಕ ತಂಡಕ್ಕೆ ಮೂರು ಹಾಗೂ ಉತ್ತರ ಪ್ರದೇಶ ತಂಡಕ್ಕೆ ಒಂದು ಅಂಕ ಲಭಿಸಿದೆ.

ನಾಲ್ಕನೇ ದಿನವಾದ ಶುಕ್ರವಾರ ಒಂದು ವಿಕೆಟ್ ಗೆ 29 ರನ್ ಗಳಿಂದ ಆಟ ಮುಂದುವರಿಸಿ, 3 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿ ಮುನ್ನುಗುತ್ತಿದ್ದಾಗ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು. ಕರ್ನಾಟಕ ಎರಡು ಪಂದ್ಯಗಳಿಂದ ಒಂಬತ್ತು ಅಂಕ ಕಲೆ ಹಾಕಿದೆ. 

ಉತ್ತರ ಪ್ರದೇಶದ ಅಲ್ಮಾಸ್ ಶೌಕತ್ ಶತಕ ಬಾರಿಸುತ್ತಿದ್ದಂತೆ ಪಂದ್ಯ ಡ್ರಾ ಎಂದು ಘೋಷಣೆಯಾಗಿದೆ. ಶೌಕತ್ 210ಎಸೆತಕ್ಕೆ 103ರನ್ ಗಳಿಸಿದ್ದರು. ಮೊಹಮ್ಮದ್ ಸೈಫ್ ೮ ರನ್ ಗಳಿಸಿದ್ದರು. ಪ್ರವಾಸಿ ತಂಡ ದ್ವಿತೀಯ ಇನ್ನಿಂಗ್ಸ್ ನಲ್ಲಿ ೪೬ ಓವರ್ ಗಳಲ್ಲಿ ೨ ವಿಕೆಟ್‌ ಗೆ ೧೩೦ ರನ್ ಗಳಿಸಿತ್ತು.

ಉಭಯ ತಂಡಗಳಿಗೆ ಇದು ಎರಡನೇ ಲೀಗ್ ಪಂದ್ಯವಾಗಿದೆ. ಮೊದಲ ಪಂದ್ಯದಲ್ಲಿ ಕರ್ನಾಟಕ ತಮಿಳುನಾಡಿನ ವಿರುದ್ಧ ಜಯ ಸಾಧಿಸಿದ್ದರೆ ಉತ್ತರ ಪ್ರದೇಶ ರೈಲ್ವೇಸ್ ತಂಡದ ವಿರುದ್ಧ ಡ್ರಾ ಸಾಧಿಸಿಕೊಂಡಿತ್ತು.

ಕರ್ನಾಟಕದ ಅಭಿಮನ್ಯು ಮಿಥುನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT