ಟೀಂ ಇಂಡಿಯಾ 
ಕ್ರಿಕೆಟ್

ಅನ್ ಲಕ್ಕಿ ಮೈದಾನದಲ್ಲಿ ಗೆದ್ದು ಬೀಗಿದ ಕೊಹ್ಲಿ ಪಡೆ, ಸರಣಿ ಕೈ ವಶ ಮಾಡಿಕೊಂಡ ಟೀಂ ಇಂಡಿಯಾ!

ಬಾರಾಬತಿ ಕ್ರೀಡಾಂದಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 4ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸರಣಿ ಕೈ ವಶ ಮಾಡಿಕೊಂಡಿದೆ. 

ಕಟಕ್ : ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 4ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದ್ದು, 2-1 ಅಂತರದಿಂದ ಸರಣಿ ಕೈ ವಶ ಮಾಡಿಕೊಂಡಿದೆ. 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ನಿಕೋಲಸ್ ಪೂರನ್ ಮತ್ತು ಕೀರನ್ ಪೊಲಾರ್ಡ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ  315 ರನ್ ಪೇರಿಸಿತು. 

ವಿಂಡೀಸ್ ಪರ ಬ್ಯಾಟಿಂಗ್ ನಲ್ಲಿ ಲೂವಿಸ್ 21, ಶಾಹಿ ಹೋಪ್ 42, ಹೆಟ್ಮರ್ 37, ನಿಕೋಲಸ್ ಪೂರನ್ 89 ಮತ್ತು ಕೀರನ್ ಪೊಲಾರ್ಡ್ ಅಜೇಯ 74 ರನ್ ಪೇರಿಸಿದರು. 

ಭಾರತ ಪರ ಬೌಲಿಂಗ್ ನಲ್ಲಿ ನವದೀಪ್ ಶೈನಿ 2, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು. 

ವೆಸ್ಟ್ ಇಂಡೀಸ್ ನೀಡಿದ 316 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರರಾದ ರಾಹುಲ್ ಶರ್ಮಾ 63, ಕೆಎಲ್ ರಾಹುಲ್ 77 ರನ್ ಗಳಿಸುವ ಮೂಲಕ ಉತ್ತಮ ಆರಂಭ ನೀಡಿದರು. ನಂತರ ಬಂದ ನಾಯಕ ವಿರಾಟ್ ಕೊಹ್ಲಿ 81 ಎಸೆತಗಳಲ್ಲಿ 4 ಬೌಂಡರಿಗಳ ಮೂಲಕ 85 ರನ್ ಬಾರಿಸಿದರು. 

ಕಳೆದ ಪಂದ್ಯದಲ್ಲಿ ಭರವಸೆ ಮೂಡಿಸಿದ ಉದಯೋನ್ಮುಖ ಆಟಗಾರರಾದ ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ಇಂದಿನ ಪಂದ್ಯದಲ್ಲಿ ನಿರಾಸೆ ಮೂಡಿಸಿದರು.  ಕೇವಲ 7 ರನ್ ಗಳಿಸಿ ಪೌಲ್ ಬೌಲಿಂಗ್ ನೀಡಿ ಫೆವಿಲಿಯನ್ ಹಾದಿ ಹಿಡಿದರು. ನಂತರ ಬಂದ ಕೇದಾರ್ ಜಾದವ್ ಕೂಡಾ ಆದೇ ಹಾದಿ ಹಿಡಿದರು. ನಂತರ ಜೊತೆಯಾದ ರವೀಂದ್ರ ಜಡೇಜಾ ಹಾಗೂ ಎಸ್ ಎನ್ ಠಾಕೂರ್  ಮುರಿಯದ ಜೊತೆಯಾಟದಿಂದ ಟೀಂ ಇಂಡಿಯಾ ಗೆಲುವು ಸಾಧಿಸಿದ್ದು, ಸರಣಿ ಕೈ ವಶಪಡಿಸಿಕೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT