ಶ್ರೀಲಂಕಾ ಟಿ20 . ಆಸ್ಟ್ರೇಲಿಯಾ ಏಕದಿನಕ್ಕೆ ಟೀಂ ಇಂಡಿಯಾ ಪ್ರಕಟ,: ಬುಮ್ರಾ ಕಂ ಬ್ಯಾಕ್, ರೋಹಿತ್ ಗೆ ರೆಸ್ಟ್ 
ಕ್ರಿಕೆಟ್

ಶ್ರೀಲಂಕಾ ಟಿ20 .ಆಸ್ಟ್ರೇಲಿಯಾ ಏಕದಿನಕ್ಕೆ ಟೀಂ ಇಂಡಿಯಾ ಪ್ರಕಟ: ಬುಮ್ರಾ ಕಂ ಬ್ಯಾಕ್, ರೋಹಿತ್ ಗೆ ರೆಸ್ಟ್

 2020 ರ ಜನವರಿಯಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ 20 ಐ ಸರಣಿ ಮತ್ತು ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಭಾರತದ ತಂಡಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ.

ನವದೆಹಲಿ: 2020 ರ ಜನವರಿಯಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ 20 ಐ ಸರಣಿ ಮತ್ತು ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಭಾರತದ ತಂಡಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ.

ಜನವರಿ 5 ಮತ್ತು 10 ರ ನಡುವಿನ 3 ಟಿ 20 ಪಂದ್ಯಗಳಲ್ಲಿ ಭಾರತ ಶ್ರೀಲಂಕಾ ವಿರುದ್ಧ ಸೆಣಸಲಿದ್ದು, ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ಜನವರಿ 14 ಮತ್ತು 19 ರ ನಡುವೆ ನಡೆಯಲಿದೆ.

ಶ್ರೀಲಂಕಾ ವಿರುದ್ಧ ಟಿ20  ಸರಣಿಗೆ ಉಪನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.ಜತೆಗೆ ಟೀಂ ಇಂಡಿಯಾ ನೆಚ್ಚಿನ ಬೌಲರ್ ಮೊಹಮ್ಮದ್ ಶಮಿ  ಅವರಿಗೆ ಸಹ ಈ ಸರಣಿಯಂದ ಬಿಡುವು ನೀಡಲಾಗಿದೆ. ಆದರೆ ಈ ಇಬ್ಬರೂ ಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಆಡಲಿದ್ದಾರೆ.

ಜೊಸ ವರ್ಷದ ಮೊದಲ ಸರಣಿಯಲ್ಲಿ ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ.

ಏತನ್ಮಧ್ಯೆ ವೇಗಿ ಜಸ್ಪ್ರಿತ್ ಬುಮ್ರಾ ಶ್ರೀಲಂಕಾ, ಆಸ್ಟ್ರೇಲಿಯಾ ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ.  ಬೆನ್ನು ನೋವಿನ ಸಮಸ್ಯೆಯಿಂದ ಅಂತರ್ಷ್ಟ್ರೀಯ ಪಂದ್ಯಗಳಿಂದ ದೂರವಾಗಿದ್ದ ಬುಮ್ರಾಮತ್ತೆ ತಂಡಕ್ಕೆ ಮರಳಿರುವುದು ಭಾರತಕ್ಕೆ ಪ್ಲಸ್ ಆಗಿದೆ. ಈ ಮಧ್ಯೆ ಬೆನ್ನು ನೋವಿಂದ ಬಳಲುತ್ತಿರುವ ಇನ್ನೋರ್ವ ಆಟಗಾರ  ದೀಪಕ್‌ ಚಹರ್‌ ಮುಂದಿನ ಐಪಿಎಲ್ ಸರಣಿಯವರೆಗೂ ಅಲಭ್ಯರಾಗಲಿದ್ದಾರೆ.

ಶ್ರೀಲಂಕಾ ವಿರುದ್ಧದ ಟಿ20ಸರಣಿಗೆ ಟೀಂ ಟೀಂ ಇಂಡಿಯಾ ಪಡೆ ಹೀಗಿದೆ-
ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ಕೆಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌, ರಿಷಭ್‌ ಪಂತ್‌ (ವಿಕೆಟ್‌ಕೀಪರ್‌), ರವೀಂದ್ರ ಜಡೇಜಾ, ಶಿವಂ ದುಬೇ, ಯಜುವೇಂದ್ರ ಚಹಲ್‌, ಕುಲ್ದೀಪ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ನವದೀಪ್‌ ಸೈನಿ, ಶಾರ್ದುಲ್‌ ಠಾಕೂರ್‌, ಮನೀಶ್‌ ಪಾಂಡೆ, ವಾಷಿಂಗ್ಟನ್‌ ಸುಂದರ್‌, ಸಂಜು ಸ್ಯಾಮ್ಸನ್‌.

ಆಸ್ಟ್ರೇಲಿಯಾ ವಿರುದ್ಧ ಏಕದಿನಕ್ಕಾಗಿ ಭಾರತ ತಂಡದ ವಿವರ ಇಂತಿದೆ
ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ರೋಹಿತ್‌ ಶರ್ಮಾ, ಕೆಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌, ಮನೀಶ್‌ ಪಾಂಡೆ, ರಿಷಭ್‌ ಪಂತ್‌ (ವಿಕೆಟ್‌ಕೀಪರ್‌), ಕೇದಾರ್‌ ಜಾಧವ್‌, ಶಿವಂ ದುಬೇ, ರವೀಂದ್ರ ಜಡೇಜಾ, ಕುಲ್ದೀಪ್‌ ಯಾದವ್‌, ಯಜುವೇಂದ್ರ ಚಹಲ್‌, ನವದೀಪ್‌ ಸೈನಿ, ಶಾರ್ದುಲ್‌ ಠಾಕೂರ್‌, ಜಸ್‌ಪ್ರೀತ್‌ ಬುಮ್ರಾ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT