ಗಂಗೂಲಿ-ರಶೀದ್ ಲತೀಫ್ 
ಕ್ರಿಕೆಟ್

ಸೌರವ್ ಗಂಗೂಲಿ ಆಲೋಚನೆ ಫ್ಲಾಪ್ ಐಡಿಯಾ: ಪಾಕ್ ಮಾಜಿ ಕ್ರಿಕೆಟಿಗ ರಶೀದ್ ಲತೀಫ್

'ನಾಲ್ಕು ಬಲಿಷ್ಟ ತಂಡಗಳ ಸೂಪರ್‌ ಸೀರೀಸ್‌' ಕ್ರಿಕೆಟ್‌ ಸರಣಿ ಆಯೋಜಿಸುವ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಅವರ ಆಲೋಚನೆಯನ್ನು ಪಾಕಿಸ್ತಾನದ ಮಾಜಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ರಶೀದ್‌ ಲತೀಫ್‌ 'ಫ್ಲಾಪ್‌ ಐಡಿಯಾ' ಎಂದು ಟೀಕಿಸಿದ್ದಾರೆ.

ನವದೆಹಲಿ: 'ನಾಲ್ಕು ಬಲಿಷ್ಟ ತಂಡಗಳ ಸೂಪರ್‌ ಸೀರೀಸ್‌' ಕ್ರಿಕೆಟ್‌ ಸರಣಿ ಆಯೋಜಿಸುವ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಅವರ ಆಲೋಚನೆಯನ್ನು ಪಾಕಿಸ್ತಾನದ ಮಾಜಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ರಶೀದ್‌ ಲತೀಫ್‌ 'ಫ್ಲಾಪ್‌ ಐಡಿಯಾ' ಎಂದು ಟೀಕಿಸಿದ್ದಾರೆ.

ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಭಾರತ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ತಂಡಗಳ ಜತೆಗೆ ಮತ್ತೊಂದು ಬಲಿಷ್ಟ ತಂಡ ಸೇರಿಸಿಕೊಂಡು 'ನಾಲ್ಕು ತಂಡಗಳ ಸೀರೀಸ್' ಆಯೋಜನೆಗೆ ಬಗ್ಗೆ ದಾದಾ ಪ್ರಸ್ತಾಪಿಸಿದ್ದರು.

"ಇಂಥ ಸರಣಿಯನ್ನು ಆಯೋಜನೆ ಮಾಡುವುದರಿಂದ ಈ ನಾಲ್ಕು ತಂಡಗಳು ಜಗತ್ತಿನ ಉಳಿದ ತಂಡಗಳನ್ನು ಮೂಲೆಗುಂಪಾಗಿಸುವ ಲೆಕ್ಕಾಚಾರ ಹೊಂದಿದೆ. ಇದು ಒಳ್ಳೆಯದಲ್ಲ. 'ಬಿಗ್‌ ತ್ರೀ' ಆಲೋಚನೆಯು 'ಫ್ಲಾಪ್ ಐಡಿಯಾ' ಆಗಿದೆ. ಈ ಮೊದಲು ಕೂಡ ಇದೇ ರೀತಿಯ ಆಲೋಚನೆ ಮಾಡಲಾಗಿತ್ತು," ಎಂದು ರಶೀದ್‌ ಲತೀಫ್‌ ತಮ್ಮ ಯೂಟ್ಯೂಬ್‌ ಚಾನಲ್‌ ಮೂಲಕ ಕಿಡಿ ಕಾರಿದ್ದಾರೆ.

ನಾಲ್ಕು ರಾಷ್ಟ್ರಗಳನ್ನು ಒಳಗೊಂಡ ಕ್ರಿಕೆಟ್‌ ಸರಣಿಯ ಆಯೋಜನೆ ಕುರಿತಾಗಿ ಬಿಸಿಸಿಐ ಜೊತೆಗೆ ಮಾತುಕತೆ ನಡೆಸಿರುವುದಾಗಿ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ಮಂಗಳವಾರ ಹೇಳಿದ್ದು, ಈ ಬಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಎದುರು ಚರ್ಚಿಸುವುದಾಗಿ ಹೇಳಿದೆ.

ಸೌರವ್‌ ಗಂಗೂಲಿ ಆಲೋಚನೆಗೆ ಐಸಿಸಿ ಸಮ್ಮತಿಸಿದರೆ 2021ರಿಂದ 4 ತಂಡಗಳನ್ನು ಒಳಗೊಂಡ ಚತುಷ್ಕೋನ ಸರಣಿ ಶುರುವಾಗಲಿದೆ. ಆದರೆ, 3ಕ್ಕಿಂತಲೂ ಹೆಚ್ಚು ತಂಡಗಳನ್ನು ಒಳಗೊಂಡ ಸರಣಿಗಳಿಗೆ ಐಸಿಸಿ ಸಮ್ಮತಿಸುವುದಿಲ್ಲ. ಹೀಗಾಗಿ ಈ ಹೊಸ ಮಾದರಿಯ ಸರಣಿ ಆರಂಭ ಕುರಿತಾಗಿ ಸಾಕಷ್ಟು ಚರ್ಚೆಯಾಗುವುದು ಬಾಕಿ ಇದೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈಗಾಗಲೇ ಪಂದ್ಯಾವಳಿ ಬಗ್ಗೆ ಮಾತನಾಡಿದ್ದಾರೆ, ಇಸಿಬಿ ಕೂಡ ಈ ತಿಂಗಳ ಆರಂಭದಲ್ಲಿ ನಡೆದ ಚರ್ಚೆಯಲ್ಲಿ ಒಪ್ಪಿಕೊಂಡಿದೆ. ಆದರೆ, ಕ್ರಿಕೆಟ್ ಆಸ್ಟ್ರೇಲಿಯಾ ಈ ವಿಷಯದ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಈ ಯೋಜನೆ ಜಾರಿಗೆ ಬಂದರೆ ಕ್ರೀಡಾಂಗಣಕ್ಕೆ ಪಂದ್ಯ ವೀಕ್ಷಿಸಲು ಹೆಚ್ಚು ಪ್ರೇಕ್ಷಕರು ಹರಿದು ಬರಲಿದ್ದಾರೆ ಎಂದು ಆಸ್ಟ್ರೇಲಿಯಾದ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 23 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

'ಹಿಂದೂ ಬೆಳವಣಿಗೆ ದರ' ಧರ್ಮ ಕೆಣಕುವ ಒಂದು ಮಾರ್ಗವಾಗಿತ್ತು: ಪ್ರಧಾನಿ ಮೋದಿ

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ 2ನೇ ಮದುವೆಗೆ ಪತಿಯ ಸಿದ್ಧತೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಬೇಡಿದ ಪಾಕ್ ಮಹಿಳೆ!

SCROLL FOR NEXT