ವಿರಾಟ್ ಕೊಹ್ಲಿ 
ಕ್ರಿಕೆಟ್

ವಿಸ್ಡನ್ ದಶಕದ ಕ್ರಿಕೆಟಿಗರ ಸಾಲಿಗೆ ವಿರಾಟ್ ಕೊಹ್ಲಿ!

ಕ್ರಿಕೆಟ್ ಆಸ್ಟ್ರೇಲಿಯಾ ದಶಕದ ಟೆಸ್ಟ್ ತಂಡದ ನಾಯಕ ಗೌರವಕ್ಕೆ ಪಾತ್ರರಾಗಿದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ದಶಕದ ವಿಸ್ಡನ್ ಐದು ಕ್ರಿಕೆಟಿಗರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಲಂಡನ್: ಕ್ರಿಕೆಟ್ ಆಸ್ಟ್ರೇಲಿಯಾ ದಶಕದ ಟೆಸ್ಟ್ ತಂಡದ ನಾಯಕ ಗೌರವಕ್ಕೆ ಪಾತ್ರರಾಗಿದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ದಶಕದ ವಿಸ್ಡನ್ ಐದು ಕ್ರಿಕೆಟಿಗರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ವಿರಾಟ್ ಕೊಹ್ಲಿ ಜತೆ, ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್, ದಕ್ಷಿಣ ಆಫ್ರಿಕಾದ ಡೇಲ್ ಸ್ಟೇನ್, ಎ.ಬಿ ಡಿವಿಲಿಯರ್ಸ್ ಹಾಗೂ ಎಲಿಸ್ ಪೆರ್ರಿ ಅವರೂ ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ವಿಸ್ಡನ್, '2014 ರಲ್ಲಿ ಇಂಗ್ಲೆಂಡ್ ಪ್ರವಾಸದ ಅಂತ್ಯ ಮತ್ತು ನವೆಂಬರ್‌ನಲ್ಲಿ ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ನಡುವೆ, ಕೊಹ್ಲಿ 63 ಸರಾಸರಿಯಲ್ಲಿ 21 ಶತಕ ಮತ್ತು 13 ಅರ್ಧಶತಕಗಳನ್ನು ಸಿಡಿಸಿದ್ದಾರೆ ಎಂದು ತಿಳಿಸಿದೆ. 

"ಕೊಹ್ಲಿ ಮೂರು ಅಂತರರಾಷ್ಟ್ರೀಯ ಸ್ವರೂಪಗಳಲ್ಲಿ ಕನಿಷ್ಠ 50 ರ ಸರಾಸರಿಯನ್ನು ಹೊಂದಿರುವ ಏಕೈಕ ಬ್ಯಾಟ್ಸ್‌ಮನ್. ಇದು ಅವರಿಗೆ ಒಂದು ವಿಶಿಷ್ಟವಾದ ಅಂಕಿಅಂಶಗಳನ್ನು ನೀಡಿದೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಕೂಡ ಇತ್ತೀಚೆಗೆ ಅವರಂತೆ ಯಾರೂ ಇಲ್ಲ ಎಂದು ಸಾಬೀತುಪಡಿಸಿದ್ದರು," ಎಂದು ಉಲ್ಲೇಖಿಸಿದೆ.

ಮಂಗಳವಾರ, ಐಸಿಸಿ ಕೊಹ್ಲಿ ಬಗ್ಗೆ ಕೆಲವು ಆಶ್ಚರ್ಯಕರ ಅಂಕಿಅಂಶಗಳನ್ನು ಪೋಸ್ಟ್ ಮಾಡಿತ್ತು. ಇದು ಈ ದಶಕದಲ್ಲಿ ವಿಶ್ವ ಕ್ರಿಕೆಟ್ ನಲ್ಲಿ ಅವರ ಪ್ರಾಬಲ್ಯವನ್ನು ತೋರಿಸಿದೆ. " ಈ ದಶಕದಲ್ಲಿ ವಿರಾಟ್ ಕೊಹ್ಲಿ: ಎಲ್ಲರಿಗಿಂತ 5,775 ಹೆಚ್ಚು ಅಂತರರಾಷ್ಟ್ರೀಯ ರನ್ ಗಳಳು, ಎಲ್ಲರಿಗಿಂತ 22 ಹೆಚ್ಚು ಅಂತಾರಾಷ್ಟ್ರೀಯ ಶತಕಗಳು ಸಿಡಿಸಿದ್ದಾರೆ" ಎಂದು ಐಸಿಸಿ ತನ್ನ ಅಧಿಕೃತ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದೆ.

2019ರ ಆವೃತ್ತಿಯಲ್ಲಿ ಕೊಹ್ಲಿ ಎಲ್ಲ ಮಾದರಿಯಿಂದ 64.05 ಸರಾಸರಿಯಲ್ಲಿ 2,370ರನ್‌ ಗಳಿಸಿದ್ದಾರೆ. 31ರ ಪ್ರಾಯದ ಬಲಗೈ ಬ್ಯಾಟ್ಸ್‌ಮನ್‌ ಸತತ ನಾಲ್ಕನೇ ಬಾರಿ ವರ್ಷದಲ್ಲಿ 2,000 ರನ್‌ ಗೂ ಅಧಿಕ ರನ್ ಕಲೆಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT