ಸೌರವ್ ಗಂಗೂಲಿ 
ಕ್ರಿಕೆಟ್

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯ: ಸೌರವ್ ಗಂಗೂಲಿ

ಕೋಲ್ಕತ್ತಾದಲ್ಲಿ ನಡೆದ ಹಗಲು-ರಾತ್ರಿ ಪಂದ್ಯ ನಡೆಸಿ ಯಶಸ್ವಿಯಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇದೀಗ ಬೆಂಗಳೂರು ಸೇರಿದಂತೆ ಹಲವು ನಗರದಲ್ಲಿ ಹಗಲು-ರಾತ್ರಿ ಪಂದ್ಯ ನಡೆಸಲು ಮುಂದಾಗಿದ್ದಾರೆ.

ನವದೆಹಲಿ: ಕೋಲ್ಕತ್ತಾದಲ್ಲಿ ನಡೆದ ಹಗಲು-ರಾತ್ರಿ ಪಂದ್ಯ ನಡೆಸಿ ಯಶಸ್ವಿಯಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇದೀಗ ಬೆಂಗಳೂರು ಸೇರಿದಂತೆ ಹಲವು ನಗರದಲ್ಲಿ ಹಗಲು-ರಾತ್ರಿ ಪಂದ್ಯ ನಡೆಸಲು ಮುಂದಾಗಿದ್ದಾರೆ. 

ಮುಂದಿನ ದಿನಗಳಲ್ಲಿ ಬೆಂಗಳೂರು, ಮುಂಬೈ, ಗುಜರಾತ್ ನಲ್ಲಿ ಪಂದ್ಯಗಳನ್ನು ನಡೆಸಲು ಸೌರವ್ ಗಂಗೂಲಿ ಚಿಂತನೆ ನಡೆಸಿದ್ದಾರೆ. ಇನ್ನು ಸಂದರ್ಶನದ ವೇಳೆ ಮಾತನಾಡಿದ್ದ ಗಂಗೂಲಿ, ಹಗಲು-ರಾತ್ರಿ ಪಂದ್ಯಗಳನ್ನು ಆಯೋಜಿಸಲು ಬೇಕಾದ ತಯಾರಿಯನ್ನು ಅದಾಗಲೇ ಆರಂಭಿಸಲಾಗಿದೆ ಎಂದರು. 

ಇನ್ನು ಕೋಲ್ಕತ್ತಾ ಪಿಂಕ್ ಟೆಸ್ಟ್ ಪಂದ್ಯದಲ್ಲಿ ಪ್ರತಿ ನಿಮಿಷಕ್ಕೆ 15 ಟಿಕೆಟ್ ಗಳನ್ನು ಮಾರಾಟ ಮಾಡಿದ್ದೇವು. ಕೇವಲ 2 ಗಂಟೆಯಲ್ಲೇ ಆನ್ ಲೈನ್ ಟಿಕೆಟ್ ಮಾರಾಟವಾಗಿತ್ತು. ಹಗಲು ರಾತ್ರಿ ಟೆಸ್ಟ್ ಪಂದ್ಯವನ್ನು ನೋಡಲು ಅಭಿಮಾನಿಗಳು ಇಚ್ಛಿಸುತ್ತಿರುವುದರಿಂದ ಮತ್ತಷ್ಟು ಪಂದ್ಯಗಳನ್ನು ಆಯೋಜಿಸವ ಕುರಿತು ಅರಿವಾಯಿತು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT