ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ಮಕ್ಕಳ ಭವಿಷ್ಯಕ್ಕಾಗಿ ಮುಂದಿನ ದಶಕ ಮೀಸಲು: ಸಚಿನ್ ತೆಂಡೂಲ್ಕರ್ 

ಎರಡು ದಶಕಗಳಿಗಿಂತ ಹೆಚ್ಚು  ಅವಧಿ ಕ್ರಿಕೆಟ್ ವೃತ್ತಿ ಜೀವನದಲ್ಲಿ ಕಳೆದಿದ್ದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರು ಮುಂದಿನ ದಶಕವನ್ನು ತನ್ನ ಮಕ್ಕಳ ಹಾಗೂ ಅವರ ಭವಿಷ್ಯಕ್ಕೆೆ ಮೀಸಲಿಡಲಾಗುವುದು ಎಂದು ತಿಳಿಸಿದ್ದಾರೆ.

ಮುಂಬೈ: ಎರಡು ದಶಕಗಳಿಗಿಂತ ಹೆಚ್ಚು  ಅವಧಿ ಕ್ರಿಕೆಟ್ ವೃತ್ತಿ ಜೀವನದಲ್ಲಿ ಕಳೆದಿದ್ದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರು ಮುಂದಿನ ದಶಕವನ್ನು ತನ್ನ ಮಕ್ಕಳ ಹಾಗೂ ಅವರ ಭವಿಷ್ಯಕ್ಕೆೆ ಮೀಸಲಿಡಲಾಗುವುದು ಎಂದು ತಿಳಿಸಿದ್ದಾರೆ.

2019ರ ವರ್ಷದ ಕೊನೆಯ ದಿನವಾದ ಮಂಗಳವಾರ ಹಲವರು ಪ್ರಸಕ್ತ ಕಹಿ ಹಾಗೂ ಸಿಹಿ ಘಟನೆಗಳನ್ನು ಮೆಲುಕು ಹಾಕುವ ಜತೆಗೆ ಮುಂದಿನ ವರ್ಷ ಹಾಗೂ ದಶಕದಲ್ಲಿ ತಮ್ಮ ಯೋಜನೆಗಳನ್ನು ಬಹಿರಂಗಪಡಿಸಿದ್ದಾರೆ. ಇದೀಗ, ಅದೇ ಹಾದಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕೂಡ ತಮ್ಮ ಮುಂದಿನ ದಶಕದ ಯೋಜನೆಯನ್ನು ಬಹಿರಂಗ ಪಡಿಸಿದ್ದಾರೆ.

‘‘ನಾಳೆಯಿಂದ 2020ರ ವರ್ಷ ಆರಂಭವಾಗುತ್ತಿದ್ದು, ಈ ದಶಕದಲ್ಲಿ ತಮ್ಮ ಮಕ್ಕಳ ಹಾಗೂ ಅವರ ಭವಿಷ್ಯದಲ್ಲಿ ಭಾಗಿಯಾಗುತ್ತಿದ್ದೇನೆ. ಅವರ ತಪ್ಪುಗಳನ್ನು ತಿದ್ದಿ , ಪ್ರೀತಿಯನ್ನು ಹಂಚುವ ಮೂಲಕ ಅವರು ದೊಡ್ಡ ಕನಸು ಕಾಣುವಂತೆ ಶಕ್ತಗೊಳಿಸಲಾಗುವುದು. ಅವರ ಆರೋಗ್ಯ, ಪೋಷಣೆ ಮತ್ತು ಶಿಕ್ಷಣದಲ್ಲಿ ಸರಿಯಾಗಿ ಹೂಡಿಕೆ ಮಾಡುವ ಮೂಲಕ ಅವರ ಕನಸುಗಳನ್ನು ಸಾಧಿಸಲು ನಾವು ಅವರಿಗೆ ಶಕ್ತಿ ತುಂಬಬೇಕು,’’ ಎಂದು ಹೇಳಿದ್ದಾರೆ.

‘‘ಕ್ರೀಡೆ ನಮ್ಮ ಮಕ್ಕಳನ್ನು ಸಕ್ರಿಯವಾಗಿ ಮತ್ತು ಆರೋಗ್ಯವಾಗಿರಿಸುವುದಲ್ಲದೆ, ಅವರು ತಂಡದ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ನೆರವಾಗುತ್ತದೆ. ಜೆತೆಗ, ಪರಸ್ಪರ ಸಂಬಂಧಗಳ ಬಗ್ಗೆೆ ಅವರಿಗೆ ತಿಳಿಸಲಿದೆ. ಎಲ್ಲಾ ಮಕ್ಕಳು ಎಲ್ಲಾ ಹಂತಗಳಲ್ಲಿ ಸಮಾನ ಅವಕಾಶಗಳನ್ನು ಪಡೆಯಬೇಕು ಮತ್ತು ತಾರತಮ್ಯ ಮಾಡಬಾರದು,’’ ಎಂದು ಅವರು ಉಲ್ಲೇಖಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT