ಎಂಎಸ್ ಧೋ 
ಕ್ರಿಕೆಟ್

ಧೋನಿ ವಿಕೆಟ್ ಪಡೆಯದೆ ನಾವು ಗೆಲ್ಲುವುದು ಸಾಧ್ಯವಿಲ್ಲ: ಕಿವೀಸ್ ಆಲ್​ರೌಂಡರ್​ ಜಿಮ್ಮಿ ನೀಶಮ್

ಭಾನುವಾರ ನ್ಯೂಜಿಲ್ಯಾಂಡ್ ನಲ್ಲಿ ಭಾರತ-ಕಿವೀಸ್ ವಿರುದ್ಧ ಅಂತಿಮ ಏಕದಿನ ಕದನ ನಡೆಯಲಿದೆ. ಕಳೆದ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಅಲಭ್ಯರಾಗಿದ್ದ ಟೀಂ ಇಂಡಿಯಾ....

ವೆಲ್ಲಿಂಗ್ಟನ್: ಭಾನುವಾರ ನ್ಯೂಜಿಲ್ಯಾಂಡ್ ನಲ್ಲಿ ಭಾರತ-ಕಿವೀಸ್ ವಿರುದ್ಧ ಅಂತಿಮ ಏಕದಿನ ಕದನ ನಡೆಯಲಿದೆ. ಕಳೆದ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಅಲಭ್ಯರಾಗಿದ್ದ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಪಂದ್ಯದಲ್ಲಿ ಆಡುತ್ತಿದ್ದಾರೆ. ಇದೇ ವೇಳೆ ಕಿವೀಸ್ ತಂಡದ ಆಲ್ ರೌಡರ್ ಜಿಮ್ಮಿ ನೀಶಮ್ ಧೋನಿಯ ಆಟವನ್ನು ಪ್ರಶಂಸಿಸ್ದ್ದಾರೆ.
ಧೋನಿ ಮೈದಾನದಲ್ಲಿರುವವರೆಗೆ ಭಾರತ ವಿರುದ್ಧ ಗೆಲ್ಲುವುದು ಅಸಾಧ್ಯ. ನಾವೇನಾದರೂ ಟೀಂ ಇಂಡಿಯಾ ವಿರುದ್ಧ ಜಯ ಸಾಧಿಸಬೇಕಾದರೆ ಧೋನಿ ವಿಕೆಟ್ ಅನ್ನು ಮೊದಲು ಕೀಳಬೇಕಾಗುತ್ತದೆ ಎಂದು ಜಿಮ್ಮಿ ನೀಶಮ್ ಅಭಿಪ್ರಾಯಪಟ್ಟರು. 
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು "ಧೋನಿಯೊಬ್ಬ ಅದ್ಭುತ ಬ್ಯಾಟ್ಸ್ ಮನ್ ಆಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಅವರಂತಾಡುವ ಬೇರೆ ಆಟಗಾರರು ವಿರಳ.ಅವರ ವಿಕೆಟ್ ಪಡೆದರೆ ಮಾತ್ರ ಗೆಲುವು ನಮ್ಮದಾಗಲಿದೆ" ಎಂದಿದ್ದಾರೆ.
"ಧೋನಿ ವಿಶ್ವಕಪ್ ತಂಡದಲ್ಲಿರುತ್ತಾರೆಯೆ, ಇಲ್ಲವೆ ಎನ್ನುವ ಬಗ್ಗೆ ಭಾರತೀಯ ಮಾದ್ಯಮಗಳಲ್ಲಿ ಕೆಲ ಚರ್ಚೆಗಳು ನಡೆದಿದೆ. ಆದರೆ ಅವರೊಬ್ಬ ಶ್ರೇಷ್ಠ ಆಟಗಾರನೆಂಬುದರಲ್ಲಿ ಎರಡು ಮಾತಿಲ್ಲ" ಅವರು ಹೇಳಿದರು.
ಕಿವೀಸ್ ನೆಲದಲ್ಲಿ ಐದು ಏಕದಿನ ಪಂದ್ಯದ ಸರಣಿಯಲ್ಲಿ ಭಾರತ ಇದಾಗಲೇ ಮೂರು ಪಂದ್ಯಗಳನ್ನು ಗೆದ್ದು ಸರಣಿ ತನ್ನದಾಗಿಸಿಕೊಂಡಿದೆ. ಆದರೆ ನಾಲ್ಕನೇ ಪಂದ್ಯದಲ್ಲಿ ಧೋನಿ ಹಾಗೂ ನಾಯಕ ಕೊಹ್ಲಿ ಅಲಭ್ಯತೆ ಪರಿಣಾಮ ಟಿಂ ಇಂಡಿಯಾ ಎಂಟು ವಿಕೆಟ್ ಗಳ ಹೀನಾಯ ಸೋಲು ಕಂಡಿದೆ. ಇದೀಗ ಐದನೇ ಪಂದ್ಯಕ್ಕೆ ಧೋನಿ ಪುನರಾಗಮನವಾಗಿದ್ದು ಟೀಂ ಇಂಡಿಯಾಗೆ ಹೆಚ್ಚಿನ ಬಲ ಸಿಕ್ಕಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT