ರಿಷಬ್ ಪಂತ್-ಅಂಜಿಕ್ಯ ರಹಾನೆ 
ಕ್ರಿಕೆಟ್

ವಿಶ್ವಕಪ್‌ಗೆ ರಿಷಬ್ ಪಂತ್, ಅಜಿಂಕ್ಯ ರಹಾನೆ ಆಯ್ಕೆ ಕಗ್ಗಂಟಾಗಿದೆ: ಎಂಎಸ್ ಕೆ ಪ್ರಸಾದ್

ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಬಳಗದಲ್ಲಿ ರಿಷಬ್ ಪಂತ್ ಹಾಗೂ ಅಜಿಂಕ್ಯ ರಹಾನೆ ಆಯ್ಕೆ ಸ್ವಲ್ಪ ತಲೆನೋವಾಗಿ ಪರಿಣಮಿಸಿದೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್...

ಲಂಡನ್: ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಬಳಗದಲ್ಲಿ ರಿಷಬ್ ಪಂತ್ ಹಾಗೂ ಅಜಿಂಕ್ಯ ರಹಾನೆ ಆಯ್ಕೆ ಸ್ವಲ್ಪ ತಲೆನೋವಾಗಿ ಪರಿಣಮಿಸಿದೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ. 
ಅಜಿಂಕ್ಯ ರಹಾನೆ ಅತ್ಯುತ್ತಮ ಆಟಗಾರ. ಆದರೆ ಕಳೆದ ಒಂದು ವರ್ಷದಿಂದ ಎಲ್ಲಾ ಮಾದರಿ ಕ್ರಿಕೆಟ್ ನಲ್ಲಿ ರಿಷಬ್ ಪಂತ್ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದು ಅವರ ಆಯ್ಕೆ ನಮಗೆ ಆರೋಗ್ಯಕರ ತಲೆ ನೋವಾಗಿ ಪರಿಣಮಿಸಿದೆ ಎಂದರು.
ಇನ್ನು ಕ್ರಿಕೆಟ್ ಎ ನಲ್ಲಿ ಅಜಿಂಕ್ಯ ರಹಾನೆ ಉತ್ತಮವಾಗಿ ಆಡುತ್ತಿದ್ದಾರೆ. ಕಳೆದ 11 ಇನ್ನಿಂಗ್ಸ್ 74.62ರ ಸರಾಸರಿಯಲ್ಲಿ 597 ರನ್ ಪೇರಿಸಿದ್ದಾರೆ. ಹೀಗಾಗಿ ನಮಗೆ ವಿಶ್ವಕಪ್ ನಲ್ಲಿ ಆಡುವ ಸೂಕ್ತ ಆಟಗಾರನ ಅವಶ್ಯಕತೆ ಇದೆ. ಸದ್ಯ ಉಭಯ ಆಟಗಾರರು ಉತ್ತಮವಾಗಿ ಆಡುತ್ತಿರುವುದು ನಮಗೆ ತಲೆನೋವಾಗಿ ಪರಿಣಮಿಸಿದೆ ಎಂದರು.
2019ರ ಐಸಿಸಿ ವಿಶ್ವಕಪ್ ಮೇ 30ರಿಂದ ಜೂನ್ 14ರವರೆಗೆ ನಡೆಯಲಿದ್ದು ಇಂಗ್ಲೆಂಡ್ ಆತಿಥ್ಯ ವಹಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT