ಸಂಗ್ರಹ ಚಿತ್ರ 
ಕ್ರಿಕೆಟ್

ಕ್ರಿಕೆಟ್ ವಿಶ್ವಕಪ್: ಇಂಡೋ-ಪಾಕ್ ಪಂದ್ಯ ವೀಕ್ಷಣೆಗೆ 4 ಲಕ್ಷ ಟಿಕೆಟ್ ಅರ್ಜಿ!

ಪುಲ್ವಾಮ ಉಗ್ರ ದಾಳಿ ಹಿನ್ನಲೆಯಲ್ಲಿ ಮುಂಬರುವ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಪಂದ್ಯಗಳನ್ನು ಭಾರತ ತಂಡ ಬಹಿಷ್ಕರಿಸಬೇಕು ಎಂಬ ವಾದ ಕೇಳಿಬರುತ್ತಿರುವಂತೆಯೇ ಅತ್ತ ಈ ಹೈ ವೋಲ್ಟೇಜ್ ಪಂದ್ಯ ವೀಕ್ಷಣೆಗಾಗಿ ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.

ಮುಂಬೈ: ಪುಲ್ವಾಮ ಉಗ್ರ ದಾಳಿ ಹಿನ್ನಲೆಯಲ್ಲಿ ಮುಂಬರುವ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಪಂದ್ಯಗಳನ್ನು ಭಾರತ ತಂಡ ಬಹಿಷ್ಕರಿಸಬೇಕು ಎಂಬ ವಾದ ಕೇಳಿಬರುತ್ತಿರುವಂತೆಯೇ ಅತ್ತ ಈ ಹೈ ವೋಲ್ಟೇಜ್ ಪಂದ್ಯ ವೀಕ್ಷಣೆಗಾಗಿ ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.
ಹೌದು.. ಇಂಗ್ಲೆಂಡ್ ನಲ್ಲಿ ಆರಂಭಗೊಳ್ಳಲಿರುವ ಐಸಿಸಿ ಏಕದಿನ ವಿಶ್ವಕಪ್​ ಸರಣಿ​ಗೆ ಈಗಾಗಲೇ ದಿನಗಣನೇ ಆರಂಭಗೊಂಡಿದ್ದು, ಮಹಾ ಸಮರ ನೋಡಲು ಕ್ರಿಕೆಟ್​ ಪ್ರೇಮಿಗಳು ತುದಿಗಾಲಲ್ಲ ನಿಂತಿದ್ದಾರೆ. ಅದರಲ್ಲೂ ಪ್ರಮುಖವಾಗಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಣೆಗಾಗಿ ಕ್ರೀಡಾಭಿಮಾನಿಗಳು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದು, ಈಗಾಗಲೇ ಪಂದ್ಯಗಳ ಟಿಕೆ್ಟ್ ಗಾಗಿ ಭಾರಿ ಪ್ರಮಾಣದಲ್ಲಿ ಅರ್ಜಿಗಳು ಬರುತ್ತಿವೆ.
ಜೂನ್​​ 16ರಂದು ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಣೆಗಾಗಿ ಈ ವರೆಗೂ ಒಟ್ಟು ನಾಲ್ಕು ಲಕ್ಷ ಅರ್ಜಿಗಳು ಬಂದಿವೆ ಎಂದು ವಿಶ್ವಕಪ್​​ ಸರಣಿ ನಿರ್ದೇಶಕ ಸ್ಟೀವ್ ಎಲ್ವೋರ್ತಿ ಹೇಳಿದ್ದಾರೆ. ಈ ಹೈ ವೋಲ್ಟೇಜ್ ಪಂದ್ಯ ಇಂಗ್ಲೆಂಡ್ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿದ್ದು, ಈ ಮೈದಾನದಲ್ಲಿ 25 ಸಾವಿರ ಮಂದಿಯ ಸಾಮರ್ಥವನ್ನು ಮಾತ್ರ ಹೊಂದಿದೆ. ಆದರೆ ಈ ಪಂದ್ಯಕ್ಕಾಗಿ ಬರೊಬ್ಬರಿ 4 ಲಕ್ಷ ಟಿಕೆಟ್ ಅರ್ಜಿಗಳು ಬಂದಿವೆ ಎಂದು ಹೇಳಿದ್ದಾರೆ.
ಅಂತೆಯೇ ಇದು ಕ್ರಿಕೆಟ್​ ಇತಿಹಾಸದಲ್ಲೇ ದಾಖಲಾಗಿರುವ ಅತಿ ದೊಡ್ಡ ಸಂಖ್ಯೆಯಾಗಿದೆ ಎಂದು ಎಲ್ವೋರ್ತಿ ಮಾಹಿತಿ ನೀಡಿದ್ದು,  ಉಳಿದಂತೆ ಇಂಗ್ಲೆಂಡ್​-ಆಸ್ಟ್ರೇಲಿಯಾ ತಂಡಗಳ ನಡುವಿನ ಪಂದ್ಯ ವೀಕ್ಷಣೆಗೆ 2ಲಕ್ಷ 40 ಸಾವಿರ ವೀಕ್ಷಕರು, ಫೈನಲ್​ ಪಂದ್ಯ ನೋಡಲು 2ಲಕ್ಷ 70 ಸಾವಿರ ಕ್ರೀಡಾ ಪ್ರೇಮಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT