ಸಂಗ್ರಹ ಚಿತ್ರ 
ಕ್ರಿಕೆಟ್

ಐಪಿಎಲ್ ಅದ್ಧೂರಿ ಉದ್ಘಾಟನೆ ಇಲ್ಲ; ವೆಚ್ಚದ ಹಣ ಪುಲ್ವಾಮಾ ಹುತಾತ್ಮ ಯೋಧರ ಕುಟುಂಬಕ್ಕೆ ಅರ್ಪಣೆ!

ಶ್ರೀಮಂತ ಚುಟುಕು ಕ್ರಿಕೆಟ್ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಮಾರ್ಚ್ 23ರಂದು ಆರಂಭಗೊಳ್ಳುತ್ತಿದ್ದು ಐಪಿಎಲ್ ಅದ್ಧೂರಿ ಉದ್ಘಾಟನೆಗೆ ಬ್ರೇಕ್ ಹಾಕಿದೆ.

ನವದೆಹಲಿ: ಶ್ರೀಮಂತ ಚುಟುಕು ಕ್ರಿಕೆಟ್ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಮಾರ್ಚ್ 23ರಂದು ಆರಂಭಗೊಳ್ಳುತ್ತಿದ್ದು ಐಪಿಎಲ್ ಅದ್ಧೂರಿ ಉದ್ಘಾಟನೆಗೆ ಬ್ರೇಕ್ ಹಾಕಿದ್ದು ಅದಕ್ಕೆ ವೆಚ್ಚವಾಗುವ ಹಣವನ್ನು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿರುವ ಯೋಧರ ಕುಟುಂಬಕ್ಕೆ ನೀಡಲು ತೀರ್ಮಾನಿಸಿದೆ. 
ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಹಾಗೂ ಚೆನ್ನೈ ನಡುವೆ ನಡೆಯಲಿದೆ. ಇದಕ್ಕೂ ಮುನ್ನ ನಡೆಯಬೇಕಿದ್ದ ಸಮಾರಂಭ ರದ್ದಾಗಿದೆ ಈ ಕುರಿತು ಬಿಸಿಸಿಐ ಸುಪ್ರೀಂ ಕೋರ್ಟ್ ನೇಮಿಸಿರುವ ಆಡಳಿತ ಮಂಡಳಿ ಮುಖ್ಯಸ್ಥ ವಿನೋದ್ ರಾಯ್ ಮಾಹಿತಿ ನೀಡಿದ್ದು ಯೋಧರ ಕುಟುಂಬಗಳಿಗೆ ನೀಡುವ ಮೂಲಕ ಹಣವನ್ನು ಸದುಪಯೋಗ ಮಾಡುವ ನಿರ್ಧಾರ ಮಾಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. 
ಇನ್ನು ಪುಲ್ವಾಮಾ ದಾಳಿಯಿಂದ ವಿಶ್ವಕಪ್ ಪಂದ್ಯ ಆಡಬೇಕಾ ಬೇಡವಾ ಎಂಬುವುದರ ನಡುವೇ ಯೋಧರ ನೆರವಿಗೆ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ. 2018ರ ಐಪಿಎಲ್ ಟೂರ್ನಿಯ ಉದ್ಘಾಟನಾ ಸಮಾರಂಭಕ್ಕೆ ಬಿಸಿಸಿಐ 20 ಕೋಟಿ ರುಪಾಯಿ ಹಣವನ್ನು ಮೀಸಲಿಟ್ಟಿತ್ತು.
ಮೊದಲಿಗೆ ಎರಡು ವಾರಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದ್ದು ಲೋಕಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದ ಬಳಿಕ ಮುಂದಿನ ಐಪಿಎಲ್ ವೇಳಾಪಟ್ಟಿ ಬಿಡುಗಡೆಯಾಗಲಿದೆ. ಬಿಡುಗಡೆ ಆಗಿರುವ ವೇಳಾಪಟ್ಟಿಯ ಅನ್ವಯ 17 ಪಂದ್ಯಗಳ ದಿನಾಂಕ ನಿಗದಿ ಆಗಿದ್ದು ಮಾರ್ಚ್ 23ರಿಂದ ಏಪ್ರಿಲ್ 5ರವರೆಗೂ ಪಂದ್ಯಗಳು ನಡೆಯಲಿದೆ. ಮಾರ್ಚ್ 24, 30 ಮತ್ತು 31ರಂದು ಎರಡು ಪಂದ್ಯಗಳು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT